ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಇದು ಪ್ರಮುಖ ಸುದ್ದಿ.ಇಂಜಿನಿಯರಿಂಗ್ ಮತ್ತು ಇತರೆ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಪಿಎಸ್‌ಯು ಉದ್ಯೋಗಗಳಿಗೆ GATE(ಗೇಟ್ ) ಪ್ರಮುಖ ಅರ್ಹತಾ ಪರೀಕ್ಷೆಯಾಗಿದೆ. ಇಂಡಿಯನ್ ಇನ್ಸ್‌ಟಿ ಟ್ಯೂಟ್ ಆಫ್‌ ಟೆಕ್ನಾಲಜಿ (ಐಐಟಿ) ಗುವಾಹಟಿಯು ಗ್ರ್ಯಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಇಂಜಿನಿಯರಿಂಗ್ (ಗೇಟ್) ೨೦೨೬ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ ಗೇಟ್

೨೦೨೫ಕ್ಕಾಗಿ ನೋಂದಣಿ ಪ್ರಕ್ರಿಯೆ ಸಹ ಆರಂಭವಾಗಿದೆ. ಗೇಟ್ (GATE))೨೦೨೬ ಅನ್ನು ಐಐಟಿ ಗುವಾಹಟಿ ಆಯೋಜಿಸುತ್ತಿದೆ. ಹೀಗಾಗಿ ಐಐಟಿ ಗುವಾಹಟಿ ಗೇಟ್-೨೦೨೬ರ ಅಧಿಕೃತ ವೆಬ್ ಸೈಟ್‌ಗೆ ಭೇಟಿ ನೀಡುವ ಮೂಲಕ ನೋಂದಣಿ ಮಾಡಬಹುದು. ಗೇಟ್ ೨೦೨೬ಕ್ಕೆ ನೋಂದಾಯಿಸಲು ಸೆ.೨೮ ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿದ್ದು, ಸೆ.೨೮ರವರೆಗೆ ಆನ್ ಲೈನ್ ನೋಂದಣಿ ತೆರೆದಿರುತ್ತದೆ.

ಪರೀಕ್ಷೆಯು ೨೦೨೬ರ -.೭,೮,೧೪ ಮತ್ತು ೧೫ರಂದು ನಡೆಯಲಿದೆ. ಮಾ.೧೯ರಂದು ಫಲಿತಾಂಶ ಪ್ರಕಟವಾಗಲಿದೆ. ಆದರೂ ಪರೀಕ್ಷಾ ವೇಳಾಪಟ್ಟಿ ಬದಲಾಗುವ ಸಾಧ್ಯತೆ ಇದೆ ಎಂದು ಐಐಟಿ ಗುವಾಹಟಿ ತಿಳಿಸಿದೆ. ಹೀಗಾಗಿ ನಿಯಮಿತವಾಗಿ ಐಐಟಿ ಗುವಾಹಟಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಿರಿ. ಗೇಟ್  (GATE) ಎಂದರೇನು ಮತ್ತು ಪಿಎಸ್‌ಯು (PSU)ಗಳಲ್ಲಿ ಉದ್ಯೋಗ ಪಡೆಯಲು ಇದು ಹೇಗೆ ಅಗತ್ಯ? ಗೇಟ್ ರಾಷ್ಟ್ರಮಟ್ಟದ ಆಪ್ಟಿಟ್ಯೂಡ್ ಪರೀಕ್ಷೆಯಾಗಿದ್ದು, ಇದನ್ನು ಇಂಜಿನಿಯರಿಂಗ್, ವಿಜ್ಞಾನ, ವಾಣಿಜ್ಯ,ವಾಸ್ತುಶಿಲ್ಪ ಸೇರಿದಂತೆ ಮಾನವಿಕ ವಿಷಯಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತದೆ.

ಗೇಟ್ ಅನ್ನು ಐಐಟಿ (IIT) ಮತ್ತು ಐಐಎಸ್‌ಸಿ (IISc)ಗಳು ಜಂಟಿಯಾಗಿ ಆಯೋಜಿಸುತ್ತವೆ. ಐಐಟಿ ಮತ್ತು ಐಐಎಸ್‌ಸಿಗಳಲ್ಲಿ ಸ್ನಾತಕೋತ್ತರ ಅಥವಾ ಪಿಜಿ ಕಾರ್ಯಕ್ರಮಗಳಿಗೆ ಪ್ರವೇಶವು ಗೇಟ್ (GATE) PSU ಗಳಲ್ಲಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಗೇಟ್ ಕನಿಷ್ಠ ಅರ್ಹತೆಯಾಗಿದೆ. ನೀವು ಗೇಟ್ ಉತ್ತೀರ್ಣರಾದ ನಂತರ ಮುಂದಿನ ಮೂರು ವರ್ಷಗಳವರೆಗೆ ಅದು ಮಾನ್ಯವಾಗಿರುತ್ತದೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

9 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

9 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

10 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

10 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

11 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

12 hours ago