ಕಲೆ, ಸಂಸ್ಕೃತಿ

ಸರಕಾರದ ಆದೇಶದಂತೆ ನಿರ್ದೇಶಕರಾಗಿ ಮುಂದುವರಿಕೆ

ನನ್ನ ಕೆಲಸದ ಕಾರ್ಯವೈಖರಿ ನೋಡಿ ಅವಧಿ ಮುಗಿದರೂ ಸರ್ಕಾರ ನನ್ನನ್ನು ಮುಂದುವರಿಸಿದೆ ಎಂದ ಅಡ್ಡಂಡ ಕಾರ್ಯಪ್ಪ

ಮೈಸೂರು: ಮೈಸೂರು ರಂಗಾಯಣದ ನಿರ್ದೇಶಕರಾಗಿ ಕಳೆದ ಮೂರು ವರ್ಷಗಳಲ್ಲಿ ರಂಗಾಯಣದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡಿದ್ದೇನೆ. ನನ್ನ ಕೆಲಸದ ಕಾರ್ಯವೈಖರಿ ನೋಡಿ ಅವಧಿ ಮುಗಿದರೂ ಸರ್ಕಾರ ನನ್ನನ್ನು ಮುಂದುವರಿಸಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದರು.

2019ರ ಡಿಸೆಂಬರ್‌ನಿಂದ 2022ರ ಡಿಸೆಂಬರ್ 27ಕ್ಕೆ ಮೂರು ವರ್ಷಗಳ ಅವಧಿ ಮುಗಿದಿದೆ. ಆದರೆ, ಸರ್ಕಾರದ ಆದೇಶದಲ್ಲಿ ಮೂರು ವರ್ಷಗಳ ಅವಧಿ ಉಲ್ಲೇಖಿಸಿಲ್ಲ. ಮುಂದಿನ ಆದೇಶದವರೆಗೆ ಅಧಿಕಾರ ಇರುತ್ತದೆ ಎನ್ನುವಂತೆ ಆದೇಶ ಹೊರಡಿಸಿರುವ ಕಾರಣ ಮುಂದುವರಿದಿದ್ದೇನೆ. ಇದರಲ್ಲಿ ಯಾವ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.

ಖ್ಯಾತ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರ ಪರ್ವ ಕಾದಂಬರಿಯನ್ನು ರಂಗರೂಪಕ್ಕಿಳಿಸಿ ಯಶಸ್ವಿ ಪ್ರದರ್ಶನ ಮಾಡಲಾಗಿದೆ. ಡಾ.ಚಂದ್ರಶೇಖರ ಕಂಬಾರ ಅವರ ಕೃತಿಯ ನಾಟಕ ಪ್ರದರ್ಶನಕ್ಕೆ ಅನುಮತಿ ಪಡೆಯಬೇಕೆಂದು ಹೇಳಿರಲಿಲ್ಲ. ಅವರೂ ಈ ವಿಚಾರದಲ್ಲಿ ಯಾವ ಮಾತನ್ನೂ ಹೇಳಿಲ್ಲ. ಪೊಲೀಸ್ ಠಾಣೆಗೆ ದೂರುಕೊಟ್ಟಿರುವ ವಿಚಾರ ಗೊತ್ತಾಗಿದೆ. ಪೊಲೀಸರು ಕೇಳಿದಾಗ ಏನು ನಡೆದಿದೆ ಎಂಬುದನ್ನು ಹೇಳುತ್ತೇನೆ. ಕಂಬಾರರು ಹಿರಿಯರು. ಅವರ ಬಗ್ಗೆ ಅತೀವ ಗೌರವವಿದೆ. ನಾಟಕದಲ್ಲಿ ಎಲ್ಲಿಯೂ ಯಾರನ್ನು ಕೆಟ್ಟದಾಗಿ ಬಿಂಬಿಸಿಲ್ಲ ಎಂದು ನುಡಿದರು.

lokesh

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

60 mins ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

1 hour ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

2 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

2 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

3 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

3 hours ago