ನನ್ನ ಕೆಲಸದ ಕಾರ್ಯವೈಖರಿ ನೋಡಿ ಅವಧಿ ಮುಗಿದರೂ ಸರ್ಕಾರ ನನ್ನನ್ನು ಮುಂದುವರಿಸಿದೆ ಎಂದ ಅಡ್ಡಂಡ ಕಾರ್ಯಪ್ಪ
ಮೈಸೂರು: ಮೈಸೂರು ರಂಗಾಯಣದ ನಿರ್ದೇಶಕರಾಗಿ ಕಳೆದ ಮೂರು ವರ್ಷಗಳಲ್ಲಿ ರಂಗಾಯಣದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡಿದ್ದೇನೆ. ನನ್ನ ಕೆಲಸದ ಕಾರ್ಯವೈಖರಿ ನೋಡಿ ಅವಧಿ ಮುಗಿದರೂ ಸರ್ಕಾರ ನನ್ನನ್ನು ಮುಂದುವರಿಸಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದರು.
2019ರ ಡಿಸೆಂಬರ್ನಿಂದ 2022ರ ಡಿಸೆಂಬರ್ 27ಕ್ಕೆ ಮೂರು ವರ್ಷಗಳ ಅವಧಿ ಮುಗಿದಿದೆ. ಆದರೆ, ಸರ್ಕಾರದ ಆದೇಶದಲ್ಲಿ ಮೂರು ವರ್ಷಗಳ ಅವಧಿ ಉಲ್ಲೇಖಿಸಿಲ್ಲ. ಮುಂದಿನ ಆದೇಶದವರೆಗೆ ಅಧಿಕಾರ ಇರುತ್ತದೆ ಎನ್ನುವಂತೆ ಆದೇಶ ಹೊರಡಿಸಿರುವ ಕಾರಣ ಮುಂದುವರಿದಿದ್ದೇನೆ. ಇದರಲ್ಲಿ ಯಾವ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.
ಖ್ಯಾತ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರ ಪರ್ವ ಕಾದಂಬರಿಯನ್ನು ರಂಗರೂಪಕ್ಕಿಳಿಸಿ ಯಶಸ್ವಿ ಪ್ರದರ್ಶನ ಮಾಡಲಾಗಿದೆ. ಡಾ.ಚಂದ್ರಶೇಖರ ಕಂಬಾರ ಅವರ ಕೃತಿಯ ನಾಟಕ ಪ್ರದರ್ಶನಕ್ಕೆ ಅನುಮತಿ ಪಡೆಯಬೇಕೆಂದು ಹೇಳಿರಲಿಲ್ಲ. ಅವರೂ ಈ ವಿಚಾರದಲ್ಲಿ ಯಾವ ಮಾತನ್ನೂ ಹೇಳಿಲ್ಲ. ಪೊಲೀಸ್ ಠಾಣೆಗೆ ದೂರುಕೊಟ್ಟಿರುವ ವಿಚಾರ ಗೊತ್ತಾಗಿದೆ. ಪೊಲೀಸರು ಕೇಳಿದಾಗ ಏನು ನಡೆದಿದೆ ಎಂಬುದನ್ನು ಹೇಳುತ್ತೇನೆ. ಕಂಬಾರರು ಹಿರಿಯರು. ಅವರ ಬಗ್ಗೆ ಅತೀವ ಗೌರವವಿದೆ. ನಾಟಕದಲ್ಲಿ ಎಲ್ಲಿಯೂ ಯಾರನ್ನು ಕೆಟ್ಟದಾಗಿ ಬಿಂಬಿಸಿಲ್ಲ ಎಂದು ನುಡಿದರು.
ನವದೆಹಲಿ: ಇಸ್ರೇಲ್-ಇರಾನ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…