ನನ್ನ ಕೆಲಸದ ಕಾರ್ಯವೈಖರಿ ನೋಡಿ ಅವಧಿ ಮುಗಿದರೂ ಸರ್ಕಾರ ನನ್ನನ್ನು ಮುಂದುವರಿಸಿದೆ ಎಂದ ಅಡ್ಡಂಡ ಕಾರ್ಯಪ್ಪ
ಮೈಸೂರು: ಮೈಸೂರು ರಂಗಾಯಣದ ನಿರ್ದೇಶಕರಾಗಿ ಕಳೆದ ಮೂರು ವರ್ಷಗಳಲ್ಲಿ ರಂಗಾಯಣದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡಿದ್ದೇನೆ. ನನ್ನ ಕೆಲಸದ ಕಾರ್ಯವೈಖರಿ ನೋಡಿ ಅವಧಿ ಮುಗಿದರೂ ಸರ್ಕಾರ ನನ್ನನ್ನು ಮುಂದುವರಿಸಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದರು.
2019ರ ಡಿಸೆಂಬರ್ನಿಂದ 2022ರ ಡಿಸೆಂಬರ್ 27ಕ್ಕೆ ಮೂರು ವರ್ಷಗಳ ಅವಧಿ ಮುಗಿದಿದೆ. ಆದರೆ, ಸರ್ಕಾರದ ಆದೇಶದಲ್ಲಿ ಮೂರು ವರ್ಷಗಳ ಅವಧಿ ಉಲ್ಲೇಖಿಸಿಲ್ಲ. ಮುಂದಿನ ಆದೇಶದವರೆಗೆ ಅಧಿಕಾರ ಇರುತ್ತದೆ ಎನ್ನುವಂತೆ ಆದೇಶ ಹೊರಡಿಸಿರುವ ಕಾರಣ ಮುಂದುವರಿದಿದ್ದೇನೆ. ಇದರಲ್ಲಿ ಯಾವ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.
ಖ್ಯಾತ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರ ಪರ್ವ ಕಾದಂಬರಿಯನ್ನು ರಂಗರೂಪಕ್ಕಿಳಿಸಿ ಯಶಸ್ವಿ ಪ್ರದರ್ಶನ ಮಾಡಲಾಗಿದೆ. ಡಾ.ಚಂದ್ರಶೇಖರ ಕಂಬಾರ ಅವರ ಕೃತಿಯ ನಾಟಕ ಪ್ರದರ್ಶನಕ್ಕೆ ಅನುಮತಿ ಪಡೆಯಬೇಕೆಂದು ಹೇಳಿರಲಿಲ್ಲ. ಅವರೂ ಈ ವಿಚಾರದಲ್ಲಿ ಯಾವ ಮಾತನ್ನೂ ಹೇಳಿಲ್ಲ. ಪೊಲೀಸ್ ಠಾಣೆಗೆ ದೂರುಕೊಟ್ಟಿರುವ ವಿಚಾರ ಗೊತ್ತಾಗಿದೆ. ಪೊಲೀಸರು ಕೇಳಿದಾಗ ಏನು ನಡೆದಿದೆ ಎಂಬುದನ್ನು ಹೇಳುತ್ತೇನೆ. ಕಂಬಾರರು ಹಿರಿಯರು. ಅವರ ಬಗ್ಗೆ ಅತೀವ ಗೌರವವಿದೆ. ನಾಟಕದಲ್ಲಿ ಎಲ್ಲಿಯೂ ಯಾರನ್ನು ಕೆಟ್ಟದಾಗಿ ಬಿಂಬಿಸಿಲ್ಲ ಎಂದು ನುಡಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…