ನನ್ನ ಕೆಲಸದ ಕಾರ್ಯವೈಖರಿ ನೋಡಿ ಅವಧಿ ಮುಗಿದರೂ ಸರ್ಕಾರ ನನ್ನನ್ನು ಮುಂದುವರಿಸಿದೆ ಎಂದ ಅಡ್ಡಂಡ ಕಾರ್ಯಪ್ಪ
ಮೈಸೂರು: ಮೈಸೂರು ರಂಗಾಯಣದ ನಿರ್ದೇಶಕರಾಗಿ ಕಳೆದ ಮೂರು ವರ್ಷಗಳಲ್ಲಿ ರಂಗಾಯಣದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡಿದ್ದೇನೆ. ನನ್ನ ಕೆಲಸದ ಕಾರ್ಯವೈಖರಿ ನೋಡಿ ಅವಧಿ ಮುಗಿದರೂ ಸರ್ಕಾರ ನನ್ನನ್ನು ಮುಂದುವರಿಸಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದರು.
2019ರ ಡಿಸೆಂಬರ್ನಿಂದ 2022ರ ಡಿಸೆಂಬರ್ 27ಕ್ಕೆ ಮೂರು ವರ್ಷಗಳ ಅವಧಿ ಮುಗಿದಿದೆ. ಆದರೆ, ಸರ್ಕಾರದ ಆದೇಶದಲ್ಲಿ ಮೂರು ವರ್ಷಗಳ ಅವಧಿ ಉಲ್ಲೇಖಿಸಿಲ್ಲ. ಮುಂದಿನ ಆದೇಶದವರೆಗೆ ಅಧಿಕಾರ ಇರುತ್ತದೆ ಎನ್ನುವಂತೆ ಆದೇಶ ಹೊರಡಿಸಿರುವ ಕಾರಣ ಮುಂದುವರಿದಿದ್ದೇನೆ. ಇದರಲ್ಲಿ ಯಾವ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.
ಖ್ಯಾತ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರ ಪರ್ವ ಕಾದಂಬರಿಯನ್ನು ರಂಗರೂಪಕ್ಕಿಳಿಸಿ ಯಶಸ್ವಿ ಪ್ರದರ್ಶನ ಮಾಡಲಾಗಿದೆ. ಡಾ.ಚಂದ್ರಶೇಖರ ಕಂಬಾರ ಅವರ ಕೃತಿಯ ನಾಟಕ ಪ್ರದರ್ಶನಕ್ಕೆ ಅನುಮತಿ ಪಡೆಯಬೇಕೆಂದು ಹೇಳಿರಲಿಲ್ಲ. ಅವರೂ ಈ ವಿಚಾರದಲ್ಲಿ ಯಾವ ಮಾತನ್ನೂ ಹೇಳಿಲ್ಲ. ಪೊಲೀಸ್ ಠಾಣೆಗೆ ದೂರುಕೊಟ್ಟಿರುವ ವಿಚಾರ ಗೊತ್ತಾಗಿದೆ. ಪೊಲೀಸರು ಕೇಳಿದಾಗ ಏನು ನಡೆದಿದೆ ಎಂಬುದನ್ನು ಹೇಳುತ್ತೇನೆ. ಕಂಬಾರರು ಹಿರಿಯರು. ಅವರ ಬಗ್ಗೆ ಅತೀವ ಗೌರವವಿದೆ. ನಾಟಕದಲ್ಲಿ ಎಲ್ಲಿಯೂ ಯಾರನ್ನು ಕೆಟ್ಟದಾಗಿ ಬಿಂಬಿಸಿಲ್ಲ ಎಂದು ನುಡಿದರು.
ಬೀಜಿಂಗ್: ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…
ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್ನಲ್ಲಿ ನಡೆದಿದೆ. ಮೈಸೂರು ಮೂಲದ…
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…
ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…
ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…
ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…