ಕಲೆ, ಸಂಸ್ಕೃತಿ

ಅಕಾಡೆಮಿಯನ್ನು ತೊರೆದಿದ್ದನ್ನು ಜ್ಞಾಪಿಸಿಕೊಂಡು ಭಾವುಕರಾದ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ

ಹೊಸಪೇಟೆಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದ್ದಾರೆ. ಮೂರು ವರ್ಷಗಳ ತಮ್ಮ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ಅವರು ಅಧ್ಯಕ್ಷ ಸ್ಥಾನವನ್ನು ತೆರವುಗೊಳಿಸಿದ್ದಾಗಿ ತಿಳಿಸಿದ್ದಾರೆ

ವಿಜಯನಗರ ಜಿಲ್ಲೆಯ ಮರಿಯಮ್ಮನ ಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ವರ್ಷಗಳ ಅಧಿಕಾರವಧಿಯಲ್ಲಿ ಸಾಕಷ್ಟು ‌ಕೆಲಸಗಳನ್ನು ಮಾಡಿದ್ದೇನೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಓಡಾಡಿ ಕಾರ್ಯಕ್ರಮಗಳನ್ನು ಮಾಡಿದ್ದೇನೆ. ಕರೊನಾ ಸಂದರ್ಭದಲ್ಲಿ ಮನೆಯಲ್ಲಿ ಕೂರದೇ ಓಡಾಡಿ ಕಾರ್ಯಕ್ರಮಗಳನ್ನು ಮಾಡಿದ್ದೇನೆ.

ಹಾವೇರಿ ಜಿಲ್ಲೆಯ ಮೂಗಳಿ ಗ್ರಾಮದಲ್ಲಿ ಜಾನಪದ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದೆ. ಸ್ಥಳೀಯ ಪ್ರತಿಭೆಗಳನ್ನ ಗುರುತಿಸಿ ಗೌರವ ಸಂಭಾವನೆ ಕೂಡ ನೀಡಿದ್ದೇವೆ. ಸಾಧಕರ ಆತ್ಮಕಥೆಯನ್ನು ಡಿಜಿಟಲ್ ಮಾಡುವ ಉದ್ದೇಶದಿಂದ 2.5 ಕೋಟಿ ರೂ. ವೆಚ್ಚದಲ್ಲಿ ಹಲವಾರು ಸಮಿತಿಗಳನ್ನು ನೇಮಕ ಮಾಡಿದ್ದೇನೆ’’ ಎಂದರು.

 

ಅಕಾಡೆಮಿಯನ್ನು ತೊರದಿದ್ದನ್ನು ಜ್ಞಾಪಿಸಿಕೊಂಡು ಭಾವುಕರಾಗಿ. ಕಳೆದ ಮೂರು ವರ್ಷ ಜನಪದ ಆಕಾಡೆಮಿ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ತೃಪ್ತಿ ಇದೆ. ಉಳಿದ ಅವಧಿಯನ್ನು ಮುಂದುವರಿಸಿದರೆ ಸಂತೋಷ. ಅಧಿಕಾರ ಇಲ್ಲದಿದ್ದರೂ ಸಂತೋಷವಾಗಿರುತ್ತೇನೆ. ಬೇರೆ ಯಾರಾದರೂ ಬಂದು ಒಳ್ಳೆಯ ಕೆಲಸ ಮಾಡಲಿ ಎಂದು ಹಾರೈಸಿದರು. ಅಕಾಡೆಮಿಯಿಂದ ನಿವೃತ್ತಿಯಾದ ನಂತರ ತಮಗೆ ರಾಜಕೀಯಕ್ಕೆ ಬರುವ ಇಚ್ಛೆಯಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

 

andolana

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

2 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

2 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

3 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

12 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

12 hours ago