ಹೊಸಪೇಟೆ: ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದ್ದಾರೆ. ಮೂರು ವರ್ಷಗಳ ತಮ್ಮ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ಅವರು ಅಧ್ಯಕ್ಷ ಸ್ಥಾನವನ್ನು ತೆರವುಗೊಳಿಸಿದ್ದಾಗಿ ತಿಳಿಸಿದ್ದಾರೆ
ವಿಜಯನಗರ ಜಿಲ್ಲೆಯ ಮರಿಯಮ್ಮನ ಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ವರ್ಷಗಳ ಅಧಿಕಾರವಧಿಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದ್ದೇನೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಓಡಾಡಿ ಕಾರ್ಯಕ್ರಮಗಳನ್ನು ಮಾಡಿದ್ದೇನೆ. ಕರೊನಾ ಸಂದರ್ಭದಲ್ಲಿ ಮನೆಯಲ್ಲಿ ಕೂರದೇ ಓಡಾಡಿ ಕಾರ್ಯಕ್ರಮಗಳನ್ನು ಮಾಡಿದ್ದೇನೆ.
ಹಾವೇರಿ ಜಿಲ್ಲೆಯ ಮೂಗಳಿ ಗ್ರಾಮದಲ್ಲಿ ಜಾನಪದ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದೆ. ಸ್ಥಳೀಯ ಪ್ರತಿಭೆಗಳನ್ನ ಗುರುತಿಸಿ ಗೌರವ ಸಂಭಾವನೆ ಕೂಡ ನೀಡಿದ್ದೇವೆ. ಸಾಧಕರ ಆತ್ಮಕಥೆಯನ್ನು ಡಿಜಿಟಲ್ ಮಾಡುವ ಉದ್ದೇಶದಿಂದ 2.5 ಕೋಟಿ ರೂ. ವೆಚ್ಚದಲ್ಲಿ ಹಲವಾರು ಸಮಿತಿಗಳನ್ನು ನೇಮಕ ಮಾಡಿದ್ದೇನೆ’’ ಎಂದರು.
ಅಕಾಡೆಮಿಯನ್ನು ತೊರದಿದ್ದನ್ನು ಜ್ಞಾಪಿಸಿಕೊಂಡು ಭಾವುಕರಾಗಿ. ಕಳೆದ ಮೂರು ವರ್ಷ ಜನಪದ ಆಕಾಡೆಮಿ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ತೃಪ್ತಿ ಇದೆ. ಉಳಿದ ಅವಧಿಯನ್ನು ಮುಂದುವರಿಸಿದರೆ ಸಂತೋಷ. ಅಧಿಕಾರ ಇಲ್ಲದಿದ್ದರೂ ಸಂತೋಷವಾಗಿರುತ್ತೇನೆ. ಬೇರೆ ಯಾರಾದರೂ ಬಂದು ಒಳ್ಳೆಯ ಕೆಲಸ ಮಾಡಲಿ ಎಂದು ಹಾರೈಸಿದರು. ಅಕಾಡೆಮಿಯಿಂದ ನಿವೃತ್ತಿಯಾದ ನಂತರ ತಮಗೆ ರಾಜಕೀಯಕ್ಕೆ ಬರುವ ಇಚ್ಛೆಯಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…