Mysore
27
overcast clouds

Social Media

ಭಾನುವಾರ, 20 ಏಪ್ರಿಲ 2025
Light
Dark

Author: Mahendra Hasaguli

Home/Mahendra Hasaguli
Mahendra Hasaguli

Mahendra Hasaguli

ಮೂಲತಃ ಗುಂಡ್ಲುಪೇಟೆ ತಾಲ್ಲೂಕು ಹಸಗೂಲಿ ಗ್ರಾಮದವನಾದ ನಾನು ಪ್ರಾಥಮಿಕ ಶಿಕ್ಷಣವನ್ನು ಹೆಗ್ಗಡಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ, ಗರಗನಹಳ್ಳಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿವರೆಗೆ ಮುಗಿಸಿ ಡಿಬಿಜೆಸಿ ಕಾಲೇಜು ಗುಂಡ್ಲುಪೇಟೆಯಲ್ಲಿ ಪಿಯು ವ್ಯಾಸಂಗ, ಜೆಎಸ್‌ಎಸ್‌ನಲ್ಲಿ ಪದವಿ ಮುಗಿಸಿ ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಎಂಎ ಕನ್ನಡ ಸ್ನಾತಕೋತ್ತರ ಪದವಿ ಮುಗಿಸಿ, ಒಂದು ವರ್ಷ ಪತ್ರಿಕೋದ್ಯಮದ ವಿದ್ಯಾರ್ಥಿಯಾಗಿ ಶಿಕ್ಷಣ ಪಡೆದು ಮೊದಲಿಗೆ 2015- 16 ರಲ್ಲಿ ಸಂಜೆದೀಪ ಪತ್ರಿಕೆಯಲ್ಲಿ ವರದಿಗಾರನಾಗಿ 2016-17 ರಲ್ಲಿ ವಿಶ್ವವಾಣಿ ಪತ್ರಿಕೆ ವರದಿಗಾರನಾಗಿ ಹಾಗೂ 2017 ರಿಂದ ಪ್ರಸ್ತುತ ಸಮಯದವರೆಗೂ ಆಂದೋಲನ ಪತ್ರಿಕೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕು ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ,

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬೆಳೆದಿರುವುದು ಸೂರ್ಯ ಕಾಂತಿ... ಪಹಣಿಯಲ್ಲಿ ನಮೂದಾಗಿರುವುದು ಜೋಳ, ಹತ್ತಿ... ಇಂತಹ ಸಂದಿಗ್ಧತೆಯಿಂದ ರೈತರು ಸೂರ್ಯಕಾಂತಿ ಬೆಂಬಲ ಬೆಲೆಯ ಸೌಲಭ್ಯದಿಂದ ವಂಚಿತರಾಗುವ ಆತಂಕ ಎದುರಿಸುತ್ತಿದ್ದಾರೆ. ಕೇಂದ್ರಸರ್ಕಾರದಿಂದ ಸೂರ್ಯಕಾಂತಿಗೆ ಬೆಂಬಲ ಬೆಲೆ ನಿಗದಿಯಾಗಿದ್ದು ಸೆ.2ರಿಂದ ಬೆಳೆಗಾರರ ನೋಂದಣಿ ಕಾರ್ಯ …