ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಭಾರೀ ಗಟ್ಟಿಯಾಗಿದ್ದು, ಅದೃಷ್ಟ ಒಲಿದು ಬಂದಾಗ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಈಗ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಇದ್ದಾರೆ. 138 ಸ್ಥಾನದಿಂದ ಕಾಂಗ್ರೆಸ್ ಸುಭದ್ರವಾಗಿದೆ. ಅದೃಷ್ಟ ಒಲಿದು ಬಂದಾಗ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ. 1996 ರಿಂದ 2004ರವರೆಗೆ ಸಿದ್ದರಾಮಯ್ಯ ಸಿಎಂ ಆಗ್ತಾರೆ ಅನ್ಕೊಂಡು ಬಂದ್ರು ಅದು ಆಗಲಿಲ್ಲ. ಈಗ ಡಿ.ಕೆ.ಶಿವಕುಮಾರ್ ನಡೆ ಬಗ್ಗೆ ನನಗೆ ಗೊತ್ತಿಲ್ಲ. ಆ ರಾಜಕೀಯದ ಬಗ್ಗೆ ನಾನು ಹೆಚ್ಚು ತಲೆಕೆಡಿಸಿಕೊಳ್ಳುತ್ತಿಲ್ಲ. ಇದರ ಬಗ್ಗೆ ಡಿಕೆಶಿ ಜೊತೆಗೂ ಕೂಡ ನಾನು ಮಾತನಾಡಿಲ್ಲ ಎಂದರು,
ಇನ್ನು ಮಾರ್ಚ್.7ರಂದು ರಾಜ್ಯ ಬಜಟ್ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಎಲ್ಲಾ ಇಲಾಖೆಗಳ ಜೊತೆ ಪ್ರಗತಿ ಪರಿಶೀಲನೆ ಸಭೆ ಮಾಡ್ತಿದೀನಿ. ಕುಡಿಯುವ ನೀರು, ನಗರಾಭಿವೃದ್ದಿ ಪ್ರಾಧಿಕಾರ ಸ್ಥಳೀಯ ಪಂಚಾಯತಿಗಳಿಗೆ ವರ್ಗಾವಣೆ ಆಗಿದೆ. ಆದ್ರೆ ಸ್ಥಳೀಯ ಆಡಳಿತದಲ್ಲಿ ಹಣವಿಲ್ಲ. ಹೀಗಾಗಿ ಈ ವಿಚಾರವನ್ನು ಸಿಎಂ ಗಮನಕ್ಕೆ ತರುತ್ತೇನೆ. ಅದಕ್ಕೂ ಮುನ್ನ ಸಭೆ ಮಾಡುತ್ತಿದ್ದೇನೆ ಎಂದರು.
ಇನ್ನು ರಾಜ್ಯ ಬಜೆಟ್ನಲ್ಲಿ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಕಬಿನಿಯಿಂದ 120 ಎಂ.ಎಲ್.ಡಿ ನೀರು ತರಬೇಕು. ಇದಕ್ಕೆ ಬಜೆಟ್ನಲ್ಲಿ ಹಣ ಕೇಳಿದ್ದೇವೆ. ನನ್ನ ಕ್ಷೇತ್ರದ ನೀರಿನ ಸಮಸ್ಯೆ, ಯುಜಿಡಿ ಸಮಸ್ಯೆ ಎಲ್ಲವನ್ನೂ ಸರಿ ಮಾಡಬೇಕು. ಪಟ್ಟಣ ಪಂಚಾಯತ್ಗಳನ್ನು ಸೇರಿಸಿ ಗ್ರೇಟರ್ ಮೈಸೂರು ಮಾಡಿ ಎಂದು ಹೇಳಿದ್ದೇನೆ. ಬಜೆಟ್ನಲ್ಲಿ ಇದನ್ನು ಸೇರಿಸಿ ಎಂದು ಹೇಳಿದ್ದೇನೆ ಎಂದು ಮಾಹಿತಿ ನೀಡಿದರು.
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…