ನವದೆಹಲಿ : ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಿಡಿಕಾರಿದ್ದು, ಇದು ವಿಪಕ್ಷಗಳ ಒಕ್ಕೂಟ I N D I A ಹಿಂದೂ ಧರ್ಮವನ್ನು ದ್ವೇಷಿಸುತ್ತದೆ ಎಂದು ತೋರಿಸುತ್ತದೆ ಎಂದಿದ್ದಾರೆ. ಅಲ್ಲದೆ ಇದು ನಮ್ಮ ಪರಂಪರೆಗೆ ಮಾಡುವ ಅವಮಾನ ಎಂದು ಟೀಕಿಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾ, ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು I N D I A ಒಕ್ಕೂಟದ “ವೋಟ್ ಬ್ಯಾಂಕ್ ರಾಜಕೀಯ” ಮತ್ತು “ತುಷ್ಟೀಕರಣ” ತಂತ್ರದ ಭಾಗವಾಗಿದೆ ಎಂದು ಆರೋಪಿಸಿದ್ದಾರೆ.
ಚೆನ್ನೈನಲ್ಲಿ ನಡೆದ ಬರಹಗಾರರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, “ಸನಾತನ ಧರ್ಮದ ಕಲ್ಪನೆಯು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ, ಅದನ್ನು ನಿರ್ಮೂಲನೆ ಮಾಡಬೇಕು” ಎಂದು ಹೇಳಿದರು. ಅಲ್ಲದೆ ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳಿಗೆ ಅವರು ಹೋಲಿಸಿದ್ದಾರೆ.
ಈ ಹೇಳಿಕೆಗಳು ಟೀಕೆಗಳಿಗೆ ಒಳಗಾದಾಗ ಪ್ರತಿಕ್ರಿಯೆ ನೀಡಿದ ಉದಯನಿಧಿ ಸ್ಟಾಲಿನ್, “ಸನಾತನ ಧರ್ಮವನ್ನು ಅನುಸರಿಸುವ ಜನರ ನರಮೇಧಕ್ಕೆ ನಾನು ಎಂದಿಗೂ ಕರೆ ನೀಡಲಿಲ್ಲ, ಸನಾತನ ಧರ್ಮವನ್ನು ಬೇರುಸಹಿತ ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ, ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ನಾನು ದೃಢವಾಗಿ ನಿಲ್ಲುತ್ತೇನೆ. ನಾನು ಸನಾತನ ಧರ್ಮದಿಂದ ಬಳಲುತ್ತಿರುವ ತುಳಿತಕ್ಕೊಳಗಾದ ಮತ್ತು ಅಂಚಿನಲ್ಲಿರುವವರ ಪರವಾಗಿ ಮಾತನಾಡಿದ್ದೇನೆ’ ಎಂದಿದ್ದಾರೆ.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…