ಬೆಂಗಳೂರು : ಅಸಮಾನತೆಯನ್ನು ಪೋಷಿಸುವ, ಸಾಮಾಜಿಕ ನ್ಯಾಯಕ್ಕೆ ವಿರುದ್ಧವಿರುವ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ತಲೆ ಕಡಿದವರಿಗೆ 10 ಕೋಟಿ ರೂ. ಗಳನ್ನು ಘೋಷಿಸಿದ್ದ ಅಯೋಧ್ಯೆ ಮೂಲದ ಧರ್ಮದರ್ಶಿ ಪರಮಹಂಸ ಆಚಾರ್ಯರ ಹೇಳಿಕೆಗೆ ಬಹು ಭಾಷಾ ನಟ ಕಿಶೋರ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು, ʼʼಮನುಷ್ಯರನ್ನು ಮನುಷ್ಯರಾಗಿ, ಕಾಣುವ ಮನುಷ್ಯ ಧರ್ಮದವರಾಗುವ. ವಿಶ್ವಮಾನವರಾಗುವʼʼ ಎಂದು ಕರೆ ನೀಡಿದ್ದಾರೆ.
ʼಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ? ಹಾಗಾದರೆ ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ ಸನಾತನ?ʼʼ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ʼʼಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕುʼʼ ಎಂದು ಟೀಕಿಸಿದ್ದಾರೆ.
ʼʼವಾಟ್ಸಾಪ್ ವಿಶ್ವವಿದ್ಯಾಲಯದಿಂದ ಹೊರಬಂದು , ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನವಶ್ಯಕ ಚರ್ಚೆಗೆ ಕಾರಣ. ರಾಜಕೀಯದ ದೃಷ್ಟಿಯಿಂದ ಉದಯನಿಧಿಯವರ ಭಾಷಾಪ್ರಯೋಗದ ತೀಕ್ಷ್ಣತೆ ಸ್ವಲ್ಪ ಕಡಿಮೆಯಾಗಬಹುದಿತ್ತೆನಿಸಿದರೂ ಅವರು ಖಂಡಿಸಿದ್ದು ಇವರ ದ್ವೇಷದ ಜಾತಿವಾದದ, ಅಸ್ಪೃಷ್ಯತೆಯ , ಅಸಮಾನತೆಯ ವೈದಿಕ ರಾಜಕೀಯವು ಕಿಡ್ನಾಪ್ ಮಾಡಿದ ಸನಾತನವನ್ನು , ಆದಿ ಅಂತ್ಯವಿಲ್ಲದ ಸನಾತನ ಪದವನ್ನಲ್ಲವೆಂಬುದು ಸ್ಪಷ್ಟ. ಅದನ್ನು ಸನಾತನಿಗಳ ಮಾರಣಹೋಮಕ್ಕೆ ಹೋಲಿಸಿದ ಇವರ ದ್ವೇಷದ ವಕ್ತಾರನಿಗೆ ಇವರ ಪಕ್ಷದ ಪ್ರಧಾನಿ ಊರಲ್ಲೆಲ್ಲ ಕಾಂಗ್ರೆಸ್ ಮುಕ್ತವೆಂದು ಕೂಗಾಡುತ್ತ ತಿರುಗಿದಾಗ ಕಾಂಗ್ರೆಸಿಗರ ಮಾರಣಹೋಮಕ್ಕೆ ಕರೆ ನೀಡಿದ್ದರೇʼʼ ಎಂದು ಪ್ರಶ್ನಿಸಿದ್ದಾರೆ.
ʼಧರ್ಮವೆನ್ನುವುದು ಅಧರ್ಮದ ವಿರುದ್ಧ ಪದವಾದರೆ, ಅಧರ್ಮವೆನ್ನುವುದು ಕೆಟ್ಟ ಕೆಲಸವೆಂದಾದರೆ, ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲʼʼ ಎಂದು ಹೇಳಿದ್ದಾರೆ.
ʼʼಈ ದಾರಿತಪ್ಪಿಸುವ ಧರ್ಮಾಂಧ ರಾಜಕೀಯದಲ್ಲಿ ನಮ್ಮ ಜ್ವಲಂತ ಸಮಸ್ಯೆಗಳೂ , ಜಾತಿವಾದದ, ರಾಜಕೀಯ, ಆರ್ಥಿಕ, ಸಾಮಾಜಿಕ ಕ್ರೌರ್ಯದ, ಅಸಮಾನತೆಯ ಸಮಸ್ಯೆಗಳೆಲ್ಲ ಕೊಚ್ಚಿ ಹೋಗುವ ಮುನ್ನ ಎಚ್ಚರಗೊಳ್ಳೋಣʼʼ ಎಂದು ನಟ ಕಿಶೋರ್ ಕುಮಾರ್ ಕರೆ ನೀಡಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…