BREAKING NEWS

ʼದಾರಿತಪ್ಪಿಸುವ ಈ ಧರ್ಮಾಂಧ ರಾಜಕೀಯದ ಬಗ್ಗೆ ಎಚ್ಚರವಾಗಿರೋಣʼ: ನಟ ಕಿಶೋರ್‌

ಬೆಂಗಳೂರು : ಅಸಮಾನತೆಯನ್ನು ಪೋಷಿಸುವ, ಸಾಮಾಜಿಕ ನ್ಯಾಯಕ್ಕೆ ವಿರುದ್ಧವಿರುವ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ತಲೆ ಕಡಿದವರಿಗೆ 10 ಕೋಟಿ ರೂ. ಗಳನ್ನು ಘೋಷಿಸಿದ್ದ ಅಯೋಧ್ಯೆ ಮೂಲದ ಧರ್ಮದರ್ಶಿ ಪರಮಹಂಸ ಆಚಾರ್ಯರ ಹೇಳಿಕೆಗೆ ಬಹು ಭಾಷಾ ನಟ ಕಿಶೋರ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿರುವ ಅವರು, ʼʼಮನುಷ್ಯರನ್ನು ಮನುಷ್ಯರಾಗಿ, ಕಾಣುವ ಮನುಷ್ಯ ಧರ್ಮದವರಾಗುವ. ವಿಶ್ವಮಾನವರಾಗುವʼʼ ಎಂದು ಕರೆ ನೀಡಿದ್ದಾರೆ.

ʼಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ? ಹಾಗಾದರೆ ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ ಸನಾತನ?ʼʼ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ʼʼಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕುʼʼ ಎಂದು ಟೀಕಿಸಿದ್ದಾರೆ.

ʼʼವಾಟ್ಸಾಪ್ ವಿಶ್ವವಿದ್ಯಾಲಯದಿಂದ ಹೊರಬಂದು , ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನವಶ್ಯಕ ಚರ್ಚೆಗೆ ಕಾರಣ. ರಾಜಕೀಯದ ದೃಷ್ಟಿಯಿಂದ ಉದಯನಿಧಿಯವರ ಭಾಷಾಪ್ರಯೋಗದ ತೀಕ್ಷ್ಣತೆ ಸ್ವಲ್ಪ ಕಡಿಮೆಯಾಗಬಹುದಿತ್ತೆನಿಸಿದರೂ ಅವರು ಖಂಡಿಸಿದ್ದು ಇವರ ದ್ವೇಷದ ಜಾತಿವಾದದ, ಅಸ್ಪೃಷ್ಯತೆಯ , ಅಸಮಾನತೆಯ ವೈದಿಕ ರಾಜಕೀಯವು ಕಿಡ್ನಾಪ್ ಮಾಡಿದ ಸನಾತನವನ್ನು , ಆದಿ ಅಂತ್ಯವಿಲ್ಲದ ಸನಾತನ ಪದವನ್ನಲ್ಲವೆಂಬುದು ಸ್ಪಷ್ಟ. ಅದನ್ನು ಸನಾತನಿಗಳ ಮಾರಣಹೋಮಕ್ಕೆ ಹೋಲಿಸಿದ ಇವರ ದ್ವೇಷದ ವಕ್ತಾರನಿಗೆ ಇವರ ಪಕ್ಷದ ಪ್ರಧಾನಿ ಊರಲ್ಲೆಲ್ಲ ಕಾಂಗ್ರೆಸ್ ಮುಕ್ತವೆಂದು ಕೂಗಾಡುತ್ತ ತಿರುಗಿದಾಗ ಕಾಂಗ್ರೆಸಿಗರ ಮಾರಣಹೋಮಕ್ಕೆ ಕರೆ ನೀಡಿದ್ದರೇʼʼ ಎಂದು ಪ್ರಶ್ನಿಸಿದ್ದಾರೆ.

ʼಧರ್ಮವೆನ್ನುವುದು ಅಧರ್ಮದ ವಿರುದ್ಧ ಪದವಾದರೆ, ಅಧರ್ಮವೆನ್ನುವುದು ಕೆಟ್ಟ ಕೆಲಸವೆಂದಾದರೆ, ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲʼʼ ಎಂದು ಹೇಳಿದ್ದಾರೆ.

ʼʼಈ ದಾರಿತಪ್ಪಿಸುವ ಧರ್ಮಾಂಧ ರಾಜಕೀಯದಲ್ಲಿ ನಮ್ಮ ಜ್ವಲಂತ ಸಮಸ್ಯೆಗಳೂ , ಜಾತಿವಾದದ, ರಾಜಕೀಯ, ಆರ್ಥಿಕ, ಸಾಮಾಜಿಕ ಕ್ರೌರ್ಯದ, ಅಸಮಾನತೆಯ ಸಮಸ್ಯೆಗಳೆಲ್ಲ ಕೊಚ್ಚಿ ಹೋಗುವ ಮುನ್ನ ಎಚ್ಚರಗೊಳ್ಳೋಣʼʼ ಎಂದು ನಟ ಕಿಶೋರ್‌ ಕುಮಾರ್‌ ಕರೆ ನೀಡಿದ್ದಾರೆ.

andolanait

Recent Posts

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

1 hour ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

1 hour ago

ಓದುಗರ ಪತ್ರ: ಆದ್ಯತೆಗಳ ಪಟ್ಟಿಯಲ್ಲಿ ಶಿಕ್ಷಣ ಎಲ್ಲಿದೆ?

ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…

1 hour ago

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

4 hours ago

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

4 hours ago

ಮುಸುಕಿನ ಜೋಳಕ್ಕೆ ರೋಗ ಬಾಧೆ; ಸಂಕಷ್ಟಕ್ಕೆ ಸಿಲುಕಿದ ರೈತರು

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…

5 hours ago