BREAKING NEWS

ದೇವೇಗೌಡರ ಸ್ವಾರ್ಥದಿಂದಾಗಿ ಪ್ರತಾಪ್‌ ಸಿಂಹಗೆ ಟಿಕೆಟ್ ಮಿಸ್‌ ಆಯ್ತು: ಸಚಿವ ವೆಂಕಟೇಶ್‌

ಮೈಸೂರು: ಮೈಸೂರು ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ರಾಜವಂಶಸ್ಥ ಯದುವೀರ್‌ ಅವರ ಹೆಸರೇ ಇರಲಿಲ್ಲ. ಆದರೆ, ದೇವೇಗೌಡರೇ ನಮ್ಮ ಸಮಾಜದ ಪ್ರತಾಪ್‌ ಸಿಂಹಗೆ ಟಿಕೆಟ್‌ ಕೈ ತಪ್ಪಿಸಿ ಯದುವೀರ್‌ ಅವರಿಗೆ ಟಿಕೆಟ್‌ ಸಿಗುವಂತೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ನಗರದ ಕಾಂಗ್ರೆಸ್‌ ಸಮಾವೇಶದಲ್ಲಿಂದು ಮಾತನಾಡದ ಅವರು, ಮಂಡ್ಯ, ಹಾಸನಕ್ಕೆ ಅನುಕೂಲವಾಗುವಂತೆ ಅವರ ಸ್ವಾರ್ಥಕ್ಕಾಗಿ ಮೈಸೂರು ಕ್ಷೇತ್ರಕ್ಕೆ ಯುದುವೀರ್‌ ಅವರನ್ನು ದೇವೇಗೌಡರು ನಿಲ್ಲಿಸಿದ್ದಾರೆ ಎಂದು ಸಚಿವ ವೆಂಕಟೇಶ್‌ ಹರಿಹಾಯ್ದರು.

ನಾನು ದೇವೇಗೌಡರ ಹತ್ತಿರದ ಸಂಬಂಧಿಯಾಗಿದ್ದೇನೆ. ಅವರ ಸ್ವಾರ್ಥದಿಂದಾಗಿ ನಾನು ಅವರಿಂದ ದೂರ ಉಳಿದೆ. ರಾಜಕೀಯವೇ ಬೇಡ ಎನ್ನುವಾಗ ಸಿಎಂ ಸಿದ್ದರಾಮಯ್ಯ ಅವರು ನನ್ನನ್ನು ರಾಜಕೀಯದಲ್ಲಿ ಉಳಿಸಿಕೊಂಡರು ಎಂದು ನೆನೆದರು.

ನಾನು ದೇವೇಗೌಡರ ಹತ್ತಿರ ಸಂಬಂಧಿ. ಅವರು ಸ್ವಾರ್ಥ ಎಂಬ ಕಾರಣಕ್ಕೆ ನಾನು ದೂರ ಉಳಿದೆ. ನಾನು ರಾಜಕೀಯ ಸಾಕು, ಬಿಡಬೇಕು ಅಂದ್ಕೊಂಡಿದ್ದೆ. ಸಿಎಂ ಸಿದ್ದರಾಮಯ್ಯ ರಾಜಕಾರಣದಲ್ಲಿ ಉಳಿಸಿಕೊಂಡರು ಎಂದರು.

ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಜಾತಿ ಕಾರ್ಟ್‌ ಪ್ಲೇ ಸಂಬಂಧ ಮಾತನಾಡಿ, ಪ್ರತಾಪ್‌ ಸಿಂಹ ಅವರು ಎಂ. ಲಕ್ಷ್ಮಣ್‌ ಅವರನ್ನು ಒಕ್ಕಲಿಗನಲ್ಲ ಎಂದು ಹೇಳಿದ್ದರು. ಆದರೆ ನಾಯ ಯಾವ ಜಾತಿಗೆ ಸೇರಿದ್ದೇನೋ ಲಕ್ಷ್ಮಣ್‌ ಅವರು ಅದೇ ಜಾತಿಗೆ ಸೇರಿದ್ದಾರೆ. ತಮ್ಮ ಕುಟುಂಬದ ಸದಸ್ಯರ ಮಾಹಿತಿಯನ್ನು ಸಹಾ ಬಿಚ್ಚಿಟ್ಟಿದ್ದಾರೆ. ಲಕ್ಷ್ಮಣ್‌ ಒಕ್ಕಲಿಗ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಪ್ರತಾಪ್‌ ಬೇರೆ ಕಡೆಯಿಂದ ಬಂದವರು. ಲಕ್ಷ್ಮಣ್‌ ಮೈಸೂರಿನವರೇ ಆಗಿದ್ದಾರೆ ಎಂದು ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಸಚಿವ ಪರಮೇಶ್ವರ್‌

ಬೆಳಗಾವಿ: ರಾಜ್ಯದಲ್ಲಿ ಪೊಲೀಸ್‌ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…

11 mins ago

ಪಾರಿವಾಳದ ಮಲ-ಮೂತ್ರದಿಂದ ಜನರಿಗೆ ಉಸಿರಾಟದ ತೊಂದರೆ: ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ

ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು…

2 hours ago

ಕಳ್ಳತನ ಪ್ರಕರಣ: ಸ್ಯಾಂಡಲ್‌ವುಡ್‌ ನಿರ್ಮಾಪಕ ಹರ್ಷವರ್ಧನ್‌ ಅರೆಸ್ಟ್‌

ಕಾರವಾರ: ಪತ್ನಿ ಕಿಡ್ನ್ಯಾಪ್‌ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್‌ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ…

2 hours ago

ಶಿವಮೊಗ್ಗ ಜೈಲಿನಿಂದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ…

2 hours ago

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌

ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್‌, ಪ್ರಶಾಂತ್‌, ಚೇತನ್‌…

3 hours ago

ಚಾಮರಾಜನಗರ| ಕಾಡಾನೆ ದಾಳಿ: ವ್ಯಕ್ತಿ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…

4 hours ago