ಮೈಸೂರು: ಮೈಸೂರು ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ರಾಜವಂಶಸ್ಥ ಯದುವೀರ್ ಅವರ ಹೆಸರೇ ಇರಲಿಲ್ಲ. ಆದರೆ, ದೇವೇಗೌಡರೇ ನಮ್ಮ ಸಮಾಜದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪಿಸಿ ಯದುವೀರ್ ಅವರಿಗೆ ಟಿಕೆಟ್ ಸಿಗುವಂತೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ನಗರದ ಕಾಂಗ್ರೆಸ್ ಸಮಾವೇಶದಲ್ಲಿಂದು ಮಾತನಾಡದ ಅವರು, ಮಂಡ್ಯ, ಹಾಸನಕ್ಕೆ ಅನುಕೂಲವಾಗುವಂತೆ ಅವರ ಸ್ವಾರ್ಥಕ್ಕಾಗಿ ಮೈಸೂರು ಕ್ಷೇತ್ರಕ್ಕೆ ಯುದುವೀರ್ ಅವರನ್ನು ದೇವೇಗೌಡರು ನಿಲ್ಲಿಸಿದ್ದಾರೆ ಎಂದು ಸಚಿವ ವೆಂಕಟೇಶ್ ಹರಿಹಾಯ್ದರು.
ನಾನು ದೇವೇಗೌಡರ ಹತ್ತಿರದ ಸಂಬಂಧಿಯಾಗಿದ್ದೇನೆ. ಅವರ ಸ್ವಾರ್ಥದಿಂದಾಗಿ ನಾನು ಅವರಿಂದ ದೂರ ಉಳಿದೆ. ರಾಜಕೀಯವೇ ಬೇಡ ಎನ್ನುವಾಗ ಸಿಎಂ ಸಿದ್ದರಾಮಯ್ಯ ಅವರು ನನ್ನನ್ನು ರಾಜಕೀಯದಲ್ಲಿ ಉಳಿಸಿಕೊಂಡರು ಎಂದು ನೆನೆದರು.
ನಾನು ದೇವೇಗೌಡರ ಹತ್ತಿರ ಸಂಬಂಧಿ. ಅವರು ಸ್ವಾರ್ಥ ಎಂಬ ಕಾರಣಕ್ಕೆ ನಾನು ದೂರ ಉಳಿದೆ. ನಾನು ರಾಜಕೀಯ ಸಾಕು, ಬಿಡಬೇಕು ಅಂದ್ಕೊಂಡಿದ್ದೆ. ಸಿಎಂ ಸಿದ್ದರಾಮಯ್ಯ ರಾಜಕಾರಣದಲ್ಲಿ ಉಳಿಸಿಕೊಂಡರು ಎಂದರು.
ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಜಾತಿ ಕಾರ್ಟ್ ಪ್ಲೇ ಸಂಬಂಧ ಮಾತನಾಡಿ, ಪ್ರತಾಪ್ ಸಿಂಹ ಅವರು ಎಂ. ಲಕ್ಷ್ಮಣ್ ಅವರನ್ನು ಒಕ್ಕಲಿಗನಲ್ಲ ಎಂದು ಹೇಳಿದ್ದರು. ಆದರೆ ನಾಯ ಯಾವ ಜಾತಿಗೆ ಸೇರಿದ್ದೇನೋ ಲಕ್ಷ್ಮಣ್ ಅವರು ಅದೇ ಜಾತಿಗೆ ಸೇರಿದ್ದಾರೆ. ತಮ್ಮ ಕುಟುಂಬದ ಸದಸ್ಯರ ಮಾಹಿತಿಯನ್ನು ಸಹಾ ಬಿಚ್ಚಿಟ್ಟಿದ್ದಾರೆ. ಲಕ್ಷ್ಮಣ್ ಒಕ್ಕಲಿಗ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಪ್ರತಾಪ್ ಬೇರೆ ಕಡೆಯಿಂದ ಬಂದವರು. ಲಕ್ಷ್ಮಣ್ ಮೈಸೂರಿನವರೇ ಆಗಿದ್ದಾರೆ ಎಂದು ತಿಳಿಸಿದರು.
ಟೆಹರಾನ್: ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…
ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…
ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…
ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…