BREAKING NEWS

ದೇವೇಗೌಡರ ಸ್ವಾರ್ಥದಿಂದಾಗಿ ಪ್ರತಾಪ್‌ ಸಿಂಹಗೆ ಟಿಕೆಟ್ ಮಿಸ್‌ ಆಯ್ತು: ಸಚಿವ ವೆಂಕಟೇಶ್‌

ಮೈಸೂರು: ಮೈಸೂರು ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ರಾಜವಂಶಸ್ಥ ಯದುವೀರ್‌ ಅವರ ಹೆಸರೇ ಇರಲಿಲ್ಲ. ಆದರೆ, ದೇವೇಗೌಡರೇ ನಮ್ಮ ಸಮಾಜದ ಪ್ರತಾಪ್‌ ಸಿಂಹಗೆ ಟಿಕೆಟ್‌ ಕೈ ತಪ್ಪಿಸಿ ಯದುವೀರ್‌ ಅವರಿಗೆ ಟಿಕೆಟ್‌ ಸಿಗುವಂತೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ನಗರದ ಕಾಂಗ್ರೆಸ್‌ ಸಮಾವೇಶದಲ್ಲಿಂದು ಮಾತನಾಡದ ಅವರು, ಮಂಡ್ಯ, ಹಾಸನಕ್ಕೆ ಅನುಕೂಲವಾಗುವಂತೆ ಅವರ ಸ್ವಾರ್ಥಕ್ಕಾಗಿ ಮೈಸೂರು ಕ್ಷೇತ್ರಕ್ಕೆ ಯುದುವೀರ್‌ ಅವರನ್ನು ದೇವೇಗೌಡರು ನಿಲ್ಲಿಸಿದ್ದಾರೆ ಎಂದು ಸಚಿವ ವೆಂಕಟೇಶ್‌ ಹರಿಹಾಯ್ದರು.

ನಾನು ದೇವೇಗೌಡರ ಹತ್ತಿರದ ಸಂಬಂಧಿಯಾಗಿದ್ದೇನೆ. ಅವರ ಸ್ವಾರ್ಥದಿಂದಾಗಿ ನಾನು ಅವರಿಂದ ದೂರ ಉಳಿದೆ. ರಾಜಕೀಯವೇ ಬೇಡ ಎನ್ನುವಾಗ ಸಿಎಂ ಸಿದ್ದರಾಮಯ್ಯ ಅವರು ನನ್ನನ್ನು ರಾಜಕೀಯದಲ್ಲಿ ಉಳಿಸಿಕೊಂಡರು ಎಂದು ನೆನೆದರು.

ನಾನು ದೇವೇಗೌಡರ ಹತ್ತಿರ ಸಂಬಂಧಿ. ಅವರು ಸ್ವಾರ್ಥ ಎಂಬ ಕಾರಣಕ್ಕೆ ನಾನು ದೂರ ಉಳಿದೆ. ನಾನು ರಾಜಕೀಯ ಸಾಕು, ಬಿಡಬೇಕು ಅಂದ್ಕೊಂಡಿದ್ದೆ. ಸಿಎಂ ಸಿದ್ದರಾಮಯ್ಯ ರಾಜಕಾರಣದಲ್ಲಿ ಉಳಿಸಿಕೊಂಡರು ಎಂದರು.

ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಜಾತಿ ಕಾರ್ಟ್‌ ಪ್ಲೇ ಸಂಬಂಧ ಮಾತನಾಡಿ, ಪ್ರತಾಪ್‌ ಸಿಂಹ ಅವರು ಎಂ. ಲಕ್ಷ್ಮಣ್‌ ಅವರನ್ನು ಒಕ್ಕಲಿಗನಲ್ಲ ಎಂದು ಹೇಳಿದ್ದರು. ಆದರೆ ನಾಯ ಯಾವ ಜಾತಿಗೆ ಸೇರಿದ್ದೇನೋ ಲಕ್ಷ್ಮಣ್‌ ಅವರು ಅದೇ ಜಾತಿಗೆ ಸೇರಿದ್ದಾರೆ. ತಮ್ಮ ಕುಟುಂಬದ ಸದಸ್ಯರ ಮಾಹಿತಿಯನ್ನು ಸಹಾ ಬಿಚ್ಚಿಟ್ಟಿದ್ದಾರೆ. ಲಕ್ಷ್ಮಣ್‌ ಒಕ್ಕಲಿಗ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಪ್ರತಾಪ್‌ ಬೇರೆ ಕಡೆಯಿಂದ ಬಂದವರು. ಲಕ್ಷ್ಮಣ್‌ ಮೈಸೂರಿನವರೇ ಆಗಿದ್ದಾರೆ ಎಂದು ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

2 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

2 hours ago

ಮತ್ತೆರಡು ಸಮಾವೇಶ ಮಾಡಲು ಸಜ್ಜಾದ ಜೆಡಿಎಸ್‌: ಚುನಾವಣೆ ಗೆಲ್ಲಲು ರಣತಂತ್ರ

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…

2 hours ago

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

2 hours ago

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

3 hours ago

ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಹೇಳಿಕೆಗೆ ಕಿಚ್ಚ ಸುದೀಪ್‌ ಕೆಂಡಾಮಂಡಲ

ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…

4 hours ago