ಲಕ್ನೋ : ಅಯೋಧ್ಯೆಯ ಹಿಂದೂ ಧರ್ಮದರ್ಶಿಯೊಬ್ಬರು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿಸ್ಟಾಲಿನ್ ತಲೆ ಕಡಿದು ತರುವಂತೆ 10 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ. ಪ್ರಚೋದನಕಾರಿ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ.
ಅಯೋಧ್ಯೆಯ ಧರ್ಮದರ್ಶಿ ಪರಮಹಂಸ ಆಚಾರ್ಯ, ಒಂದು ಕೈಯಲ್ಲಿ ಉದಯನಿಧಿಯ ಪೋಸ್ಟರ್, ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದುಕೊಂಡು ಉದಯನಿಧಿ ಅವರ ಶಿರಚ್ಛೇದನವನ್ನು ಸಾಂಕೇತಿಕವಾಗಿ ಪ್ರದರ್ಶಿಸುವ ವೀಡಿಯೊವನ್ನ ಬಿಡುಗಡೆ ಮಾಡಿದ್ದಾರೆ. ಪೋಸ್ಟರ್ಗೆ ಬೆಂಕಿ ಹಚ್ಚುವ ದೃಶ್ಯವನ್ನೂ ವೀಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಡಿಎಂಕೆ ಸಚಿವರ ತಲೆ ಕಡಿದು ತಂದವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಉದಯನಿಧಿ ಸ್ಟಾಲಿನ್, ಸ್ವಾಮೀಜಿಯೊಬ್ಬರು ನನ್ನ ತಲೆಗೆ 10 ಕೋಟಿ ರೂ. ಬೆಲೆ ಕಟ್ಟಿದ್ದಾರೆ. ಅವರು ನಿಜವಾದ ಸಂತನೋ ಅಥವಾ ನಕಲಿ ಸಂತನೋ? ನನ್ನ ತಲೆಯನ್ನು ಏಕೆ ಅಷ್ಟು ಇಷ್ಟಪಡುತ್ತೀರಿ? ನಿಮಗೆ ಇಷ್ಟು ಹಣ ಎಲ್ಲಿಂದ ಬರುತ್ತದೆ? ನನ್ನ ತಲೆ ಕೂದಲು ಬಾಚುವುದಕ್ಕೆ ಏಕೆ 10 ಕೋಟಿ ರೂ. ಘೋಷಣೆ ಮಾಡಿದ್ದೀರಿ? 10 ರೂಪಾತಿ ಬಾಚಣಿಗೆ ಕೊಟ್ಟರೆ ನಾನೇ ಬಾಚಿಕೊಳ್ಳುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…