ಲಕ್ನೋ : ಅಯೋಧ್ಯೆಯ ಹಿಂದೂ ಧರ್ಮದರ್ಶಿಯೊಬ್ಬರು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿಸ್ಟಾಲಿನ್ ತಲೆ ಕಡಿದು ತರುವಂತೆ 10 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ. ಪ್ರಚೋದನಕಾರಿ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ.
ಅಯೋಧ್ಯೆಯ ಧರ್ಮದರ್ಶಿ ಪರಮಹಂಸ ಆಚಾರ್ಯ, ಒಂದು ಕೈಯಲ್ಲಿ ಉದಯನಿಧಿಯ ಪೋಸ್ಟರ್, ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದುಕೊಂಡು ಉದಯನಿಧಿ ಅವರ ಶಿರಚ್ಛೇದನವನ್ನು ಸಾಂಕೇತಿಕವಾಗಿ ಪ್ರದರ್ಶಿಸುವ ವೀಡಿಯೊವನ್ನ ಬಿಡುಗಡೆ ಮಾಡಿದ್ದಾರೆ. ಪೋಸ್ಟರ್ಗೆ ಬೆಂಕಿ ಹಚ್ಚುವ ದೃಶ್ಯವನ್ನೂ ವೀಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಡಿಎಂಕೆ ಸಚಿವರ ತಲೆ ಕಡಿದು ತಂದವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಉದಯನಿಧಿ ಸ್ಟಾಲಿನ್, ಸ್ವಾಮೀಜಿಯೊಬ್ಬರು ನನ್ನ ತಲೆಗೆ 10 ಕೋಟಿ ರೂ. ಬೆಲೆ ಕಟ್ಟಿದ್ದಾರೆ. ಅವರು ನಿಜವಾದ ಸಂತನೋ ಅಥವಾ ನಕಲಿ ಸಂತನೋ? ನನ್ನ ತಲೆಯನ್ನು ಏಕೆ ಅಷ್ಟು ಇಷ್ಟಪಡುತ್ತೀರಿ? ನಿಮಗೆ ಇಷ್ಟು ಹಣ ಎಲ್ಲಿಂದ ಬರುತ್ತದೆ? ನನ್ನ ತಲೆ ಕೂದಲು ಬಾಚುವುದಕ್ಕೆ ಏಕೆ 10 ಕೋಟಿ ರೂ. ಘೋಷಣೆ ಮಾಡಿದ್ದೀರಿ? 10 ರೂಪಾತಿ ಬಾಚಣಿಗೆ ಕೊಟ್ಟರೆ ನಾನೇ ಬಾಚಿಕೊಳ್ಳುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…