ಮಡಿಕೇರಿ : ಚುನಾವಣೆಯ ದಿನ ಮತ ಚಲಾಯಿಸಿ ಬಂದವರಿಗೆ ಶೇ 10ರಷ್ಟು ರಿಯಾಯಿತಿ ನೀಡಲು ಕೊಡಗು ಜಿಲ್ಲಾ ಹೋಟೆಲ್, ರೆಸಾರ್ಟ್ಸ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ನಿರ್ಧರಿಸಿದೆ. ಈ ನಿರ್ಧಾರದ ಬೆನ್ನಿಗೇ, ರಿಯಾಯಿತಿ ನೀಡಲು ಚಿಂತನೆ ನಡೆಸುತ್ತಿರುವುದಾಗಿ ಕೂರ್ಗ್ ಹೋಂಸ್ಟೇ ಅಸೋಸಿಯೇಷನ್ ಕೂಡ ತಿಳಿಸಿದೆ.
ಮತದಾನ ಮಾಡದೇ ಬರುವ ಕರ್ನಾಟಕದವರಿಗೆ ತಂಗಲು ಅವಕಾಶವಿಲ್ಲ. ಆದರೆ, ಮತದಾನ ಮಾಡಿ ಬಂದವರಿಗೆ ಶೇ 10ರಷ್ಟು ರಿಯಾಯಿತಿ ದೊರಕಲಿದೆ. ಅವರಿಗಷ್ಟೇ ಈ ನಿರ್ಬಂಧ, ರಿಯಾಯಿತಿ ಅನ್ವಯಿಸುತ್ತದೆ.
ಕೊಡಗಿನಲ್ಲಿರುವ 300ಕ್ಕೂ ಅಧಿಕ ಹೋಟೆಲ್, ರೆಸಾರ್ಟ್ಗಳಲ್ಲಿ ರಿಯಾಯಿತಿ ಸಿಗುತ್ತದೆ. ಹೋಂಸ್ಟೇ ಮಾಲೀಕರು ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ.ಇತ್ತೀಚೆಗೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೋಟೆಲ್ ಮಾಲೀಕರು ಹಾಗೂ ಹೋಂಸ್ಟೇ ಮಾಲೀಕರಲ್ಲಿ ಈ ಕುರಿತು ಮನವಿ ಮಾಡಿದ್ದರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…