ಬೆಂಗಳೂರು: ವಿದ್ಯಾರ್ಥಿಗಳು, ಪೋಷಕರಿಗೆ ಬಿಗ್ ಶಾಕ್ ಎನ್ನುವಂತೆ ಎಂಜಿನಿಯರಿಂಗ್ ಸೀಟುಗಳ ಶುಲ್ಕದಲ್ಲಿ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ.
ಗುರುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಫಲಿತಾಂಶ ಪ್ರಕಟಿಸಲಾಗಿತ್ತು. ಈ ಬೆನ್ನಲ್ಲೇ ಈ ವರ್ಷದಿಂದಲೇ ಪೂರ್ವಾನ್ವಯ ವಾಗುವಂತೆ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದಡಿ ದಾಖಲಾಗುವ ಹಾಗೂ ಕಾಮೆಡ್-ಕೆ ಕೋಟಾದಡಿಯ ಸೀಟುಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರು, ಎಂಜಿನಿಯರಿಂಗ್ ಸೀಟುಗಳ ಸರ್ಕಾರಿ ಕೋಟಾದಡಿಯ ಖಾಸಗಿ ಶಾಲೆಗಳ ಸೀಟುಗಳ ಶುಲ್ಕವನ್ನು ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ. ಆದರೇ, ಇದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಾಡಿದ ನಿರ್ಧಾರವಲ್ಲ. ಹಿಂದಿನ ಬಿಜೆಪಿ ಸರ್ಕಾರದಲ್ಲೇ ತೀರ್ಮಾನ ಆಗಿತ್ತು. ಈಗ ಜಾರಿಗೊಳ್ಳುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.
ನಿಯಮಾನುಸಾರ ಕ್ರಮವನ್ನು ಹಿಂದಿನ ಸರ್ಕಾರ ಕೈಗೊಂಡಿದೆ. ಇದನ್ನು ಪರಿಷ್ಕರಿಸಿ ಮತ್ತೆ ಕಡಿಮೆ ಮಾಡುವ, ಹಿಂಪಡೆಯುವ ಪ್ರಶ್ನೆ ಇಲ್ಲ. ಶೀಘ್ರವೇ ಶೇ.10ರಷ್ಟು ಶುಲ್ಕ ಹೆಚ್ಚಳದ ಅನುಸಾರ ಪರಿಷ್ಕೃತ ಶುಲ್ಕದ ಮಾಹಿತಿ ಪ್ರಕಟಿಸಲಾಗುವುದು ಎಂದಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…