ಬೆಂಗಳೂರು: ವಿದ್ಯಾರ್ಥಿಗಳು, ಪೋಷಕರಿಗೆ ಬಿಗ್ ಶಾಕ್ ಎನ್ನುವಂತೆ ಎಂಜಿನಿಯರಿಂಗ್ ಸೀಟುಗಳ ಶುಲ್ಕದಲ್ಲಿ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ.
ಗುರುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಫಲಿತಾಂಶ ಪ್ರಕಟಿಸಲಾಗಿತ್ತು. ಈ ಬೆನ್ನಲ್ಲೇ ಈ ವರ್ಷದಿಂದಲೇ ಪೂರ್ವಾನ್ವಯ ವಾಗುವಂತೆ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದಡಿ ದಾಖಲಾಗುವ ಹಾಗೂ ಕಾಮೆಡ್-ಕೆ ಕೋಟಾದಡಿಯ ಸೀಟುಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರು, ಎಂಜಿನಿಯರಿಂಗ್ ಸೀಟುಗಳ ಸರ್ಕಾರಿ ಕೋಟಾದಡಿಯ ಖಾಸಗಿ ಶಾಲೆಗಳ ಸೀಟುಗಳ ಶುಲ್ಕವನ್ನು ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ. ಆದರೇ, ಇದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಾಡಿದ ನಿರ್ಧಾರವಲ್ಲ. ಹಿಂದಿನ ಬಿಜೆಪಿ ಸರ್ಕಾರದಲ್ಲೇ ತೀರ್ಮಾನ ಆಗಿತ್ತು. ಈಗ ಜಾರಿಗೊಳ್ಳುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.
ನಿಯಮಾನುಸಾರ ಕ್ರಮವನ್ನು ಹಿಂದಿನ ಸರ್ಕಾರ ಕೈಗೊಂಡಿದೆ. ಇದನ್ನು ಪರಿಷ್ಕರಿಸಿ ಮತ್ತೆ ಕಡಿಮೆ ಮಾಡುವ, ಹಿಂಪಡೆಯುವ ಪ್ರಶ್ನೆ ಇಲ್ಲ. ಶೀಘ್ರವೇ ಶೇ.10ರಷ್ಟು ಶುಲ್ಕ ಹೆಚ್ಚಳದ ಅನುಸಾರ ಪರಿಷ್ಕೃತ ಶುಲ್ಕದ ಮಾಹಿತಿ ಪ್ರಕಟಿಸಲಾಗುವುದು ಎಂದಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…