BREAKING NEWS

ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಕೇರಳ ಸರ್ಕಾರ

ತಿರುವನಂತಪುರಂ: ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿರುವ ಕಣ್ಣೂರಿನ ಮುಜಪ್ಪಿಲಂಗಾಡ್‌ 11 ವರ್ಷದ ನಿಹಾಲ್ ನೌಶಾದ್ ಎಂಬ ಬಾಲಕನ ಕುಟುಂಬಕ್ಕೆ ಇಂದು (ಜೂನ್​​.27) ನಡೆದ ಕೇರಳ ಸಚಿವ ಸಂಪುಟ ಸಭೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಯಿಂದ ಹಣ ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದೆ. ಬಾಲಕನ ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿ ನಡೆದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಿಹಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ನಿಹಾಲ್‌ನ ಸಾವಿನ ಕೆಲವು ದಿನಗಳ ನಂತರ, ಮುಜಪ್ಪಿಲಂಗಾಡ್‌ನಲ್ಲಿ ಬೀದಿ ನಾಯಿ ದಾಳಿಯಿಂದ ಮತ್ತೊಬ್ಬ ಶಾಲಾ ಬಾಲಕಿ ಜಾನ್ವಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಕಳೆದ ವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ, ರೇಬಿಸ್ ಸೋಂಕಿನಿಂದ ಸಾವನ್ನಪ್ಪಿದ ಕೋಝಿಕ್ಕೋಡ್ ಮೂಲದ ಶೀಬಾಕುಮಾರಿ ಅವರ ಕುಟುಂಬಕ್ಕೆ ಕೇರಳ ಸರ್ಕಾರ 2 ಲಕ್ಷ ರೂ. ನೀಡಲಾಗಿದೆ.

ನಿಹಾಲ್ ನೌಶಾದ್ ಮೇಲೆ ನಾಯಿಗಳ ದಾಳಿ: ಕೇರಳದ ಕಣ್ಣೂರು ಜಿಲ್ಲೆಯ ಮುಜಪ್ಪಿಲಂಗಾಡ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಭಾನುವಾರ ರಾತ್ರಿ ಪತ್ತೆಯಾಗಿದ್ದಾನೆ.  ಬೀದಿನಾಯಿ ದಾಳಿಯಿಂದ ಗಾಯಗೊಂಡಿದ್ದ ಬಾಲಕ, ವಾಕ್ ದೋಷದಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ. ಪೊಲೀಸರ ಪ್ರಕಾರ, ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಬಾಲಕ ತನ್ನ ಮನೆಯಿಂದ ನಾಪತ್ತೆಯಾಗಿದ್ದನು. ಬಾಲಕ ಆಟವಾಡಲು ಹೋಗುತ್ತಿದ್ದ ಸಮೀಪದ ಪ್ಲಾಟ್‌ನಲ್ಲಿ ಹುಡುಕಿದ್ದಾರೆ. ಅಲ್ಲಿ ಆತ ನೆಲದ ಮೇಲೆ ಬಿದ್ದಿದ್ದು, ರಕ್ತಸ್ರಾವವಾಗುತ್ತಿರುವುದು ಪತ್ತೆಯಾಗಿದೆ. ತಕ್ಷಣವೇ ರಾತ್ರಿ 8.30 ರ ಹೊತ್ತಿಗೆ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಹೇಳಿದ್ದಾರೆ,

ಮರಣೋತ್ತರ ಪರೀಕ್ಷೆ ಬಳಿಕ ನಿಹಾಲ್ ಅಂತ್ಯಕ್ರಿಯೆ ಸೋಮವಾರ ನಡೆಯಿತು. ಬೀದಿ ನಾಯಿಗಳ ಹಿಂಡು ದಾಳಿಯಲ್ಲಿ ಬಾಲಕನ ತೊಡೆಯ ಒಂದು ಭಾಗವನ್ನು ತಿಂದಿದೆ. ಘಟನೆಯ ನಂತರ, ಸ್ಥಳೀಯ ಸಂಸ್ಥೆಯು ಪ್ರದೇಶದಲ್ಲಿ ಬೀದಿ ನಾಯಿಗಳನ್ನು ಸೆರೆಹಿಡಿಯಲು ಪ್ರಾರಂಭಿಸಿದ್ದಾರೆ.

andolanait

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

7 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

7 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

7 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

7 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

7 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

7 hours ago