BREAKING NEWS

ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಕೇರಳ ಸರ್ಕಾರ

ತಿರುವನಂತಪುರಂ: ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿರುವ ಕಣ್ಣೂರಿನ ಮುಜಪ್ಪಿಲಂಗಾಡ್‌ 11 ವರ್ಷದ ನಿಹಾಲ್ ನೌಶಾದ್ ಎಂಬ ಬಾಲಕನ ಕುಟುಂಬಕ್ಕೆ ಇಂದು (ಜೂನ್​​.27) ನಡೆದ ಕೇರಳ ಸಚಿವ ಸಂಪುಟ ಸಭೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಯಿಂದ ಹಣ ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದೆ. ಬಾಲಕನ ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿ ನಡೆದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಿಹಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ನಿಹಾಲ್‌ನ ಸಾವಿನ ಕೆಲವು ದಿನಗಳ ನಂತರ, ಮುಜಪ್ಪಿಲಂಗಾಡ್‌ನಲ್ಲಿ ಬೀದಿ ನಾಯಿ ದಾಳಿಯಿಂದ ಮತ್ತೊಬ್ಬ ಶಾಲಾ ಬಾಲಕಿ ಜಾನ್ವಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಕಳೆದ ವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ, ರೇಬಿಸ್ ಸೋಂಕಿನಿಂದ ಸಾವನ್ನಪ್ಪಿದ ಕೋಝಿಕ್ಕೋಡ್ ಮೂಲದ ಶೀಬಾಕುಮಾರಿ ಅವರ ಕುಟುಂಬಕ್ಕೆ ಕೇರಳ ಸರ್ಕಾರ 2 ಲಕ್ಷ ರೂ. ನೀಡಲಾಗಿದೆ.

ನಿಹಾಲ್ ನೌಶಾದ್ ಮೇಲೆ ನಾಯಿಗಳ ದಾಳಿ: ಕೇರಳದ ಕಣ್ಣೂರು ಜಿಲ್ಲೆಯ ಮುಜಪ್ಪಿಲಂಗಾಡ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಭಾನುವಾರ ರಾತ್ರಿ ಪತ್ತೆಯಾಗಿದ್ದಾನೆ.  ಬೀದಿನಾಯಿ ದಾಳಿಯಿಂದ ಗಾಯಗೊಂಡಿದ್ದ ಬಾಲಕ, ವಾಕ್ ದೋಷದಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ. ಪೊಲೀಸರ ಪ್ರಕಾರ, ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಬಾಲಕ ತನ್ನ ಮನೆಯಿಂದ ನಾಪತ್ತೆಯಾಗಿದ್ದನು. ಬಾಲಕ ಆಟವಾಡಲು ಹೋಗುತ್ತಿದ್ದ ಸಮೀಪದ ಪ್ಲಾಟ್‌ನಲ್ಲಿ ಹುಡುಕಿದ್ದಾರೆ. ಅಲ್ಲಿ ಆತ ನೆಲದ ಮೇಲೆ ಬಿದ್ದಿದ್ದು, ರಕ್ತಸ್ರಾವವಾಗುತ್ತಿರುವುದು ಪತ್ತೆಯಾಗಿದೆ. ತಕ್ಷಣವೇ ರಾತ್ರಿ 8.30 ರ ಹೊತ್ತಿಗೆ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಹೇಳಿದ್ದಾರೆ,

ಮರಣೋತ್ತರ ಪರೀಕ್ಷೆ ಬಳಿಕ ನಿಹಾಲ್ ಅಂತ್ಯಕ್ರಿಯೆ ಸೋಮವಾರ ನಡೆಯಿತು. ಬೀದಿ ನಾಯಿಗಳ ಹಿಂಡು ದಾಳಿಯಲ್ಲಿ ಬಾಲಕನ ತೊಡೆಯ ಒಂದು ಭಾಗವನ್ನು ತಿಂದಿದೆ. ಘಟನೆಯ ನಂತರ, ಸ್ಥಳೀಯ ಸಂಸ್ಥೆಯು ಪ್ರದೇಶದಲ್ಲಿ ಬೀದಿ ನಾಯಿಗಳನ್ನು ಸೆರೆಹಿಡಿಯಲು ಪ್ರಾರಂಭಿಸಿದ್ದಾರೆ.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

6 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

7 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

7 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

8 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

8 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

8 hours ago