ನವದೆಹಲಿ: ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳು ಮತ್ತು ಅಕ್ರಮಗಳ ವಿರುದ್ಧ ಕಠಿಣವಾಗಿ ವ್ಯವಹರಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು.
ಈ ಮಸೂದೆಯಲ್ಲಿ ಸರ್ಕಾರಿ ಪರೀಕ್ಷಾ ಅಕ್ರಮ ಸಾಬೀತಾದರೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ ದಂಡ ಹೇರಲಾಗುತ್ತದೆ.
ವಿರೋಧ ಪಕ್ಷದ ಸದಸ್ಯರು ಪ್ರಸ್ತಾಪಿಸಿದ ಕೆಲವು ತಿದ್ದುಪಡಿಗಳನ್ನು ತಿರಸ್ಕರಿಸಿದ ನಂತರ ಲೋಕಸಭೆಯು ಮಸೂದೆಯನ್ನು ಅಂಗೀಕರಿಸಿತು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಕಲು, ಅಕ್ರಮ ತಡೆಗಾಗಿ ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿದ ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ವಿಧೇಯಕಕ್ಕೆ ಅಂಗೀಕಾರ ದೊರೆತಿದೆ.
ವಿಧೇಯಕಕ್ಕೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದ್ದು, ಬಳಿಕ ರಾಜ್ಯಸಭೆಯಲ್ಲಿ ಮಂಡಿಸಲಾಗುತ್ತದೆ. ರಾಜ್ಯಸಭೆಯಲ್ಲೂ ಅಂಗೀಕಾರ ದೊರೆತ ನಂತರ ರಾಷ್ಟ್ರಪತಿ ಸಹಿಗೆ ಕಳುಹಿಸಲಾಗುತ್ತದೆ. ರಾಷ್ಟ್ರಪತಿ ಅಂಗೀಕಾರದ ಬಳಿಕ ವಿಧೇಯಕವು ಕಾಯ್ದೆಯಾಗಿ ಜಾರಿಗೆ ಬರಲಿದೆ.
ವಿಧೇಯಕದಲ್ಲಿನ ಪ್ರಮುಖಾಂಶಗಳು
1.ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡುವವರಿಗೆ ಕನಿಷ್ಠ 3-5 ವರ್ಷಗಳ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ ಸೇರಿದಂತೆ ಕಠಿಣ ಕ್ರಮಗಳನ್ನು ಸೂಚಿಸುತ್ತದೆ. ಸಂಘಟಿತ ಅಪರಾಧ ಪ್ರಕರಣಗಳಲ್ಲಿ 5-10 ವರ್ಷಗಳ ಸಜೆ, 1 ಕೋಟಿ ರೂ. ದಂಡ ದೊರೆಯಲಿದೆ.
2. ಈ ಕಾನೂನಿನ ವ್ಯಾಪ್ತಿಯು ಕೇಂದ್ರ ಮತ್ತು ರಾಜ್ಯ ಲೋಕಸೇವಾ ಆಯೋಗಗಳು, ರೈಲ್ವೆ ಮತ್ತು ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ಸೇರಿ ವಿವಿಧ ಸಾರ್ವಜನಿಕ ಪರೀಕ್ಷೆಗಳನ್ನು ಒಳಗೊಂಡಿದೆ.
3.ಶಿಕ್ಷಣ ಸಂಸ್ಥೆಗಳು ಅಕ್ರಮಗಳಲ್ಲಿ ತೊಡಗಿದ್ದರೆ ಆಸ್ತಿಯ ಜಪ್ತಿಯ ಜತೆಗೆ ಪರೀಕ್ಷಾ ವೆಚ್ಚ ವಸೂಲಿ ಮಾಡಲಾಗುವುದು.
4.ಅಕ್ರಮಗಳು ಕಂಡುಬಂದರೆ ಪರೀಕ್ಷೆಗಳನ್ನು ನಡೆಸುವ ಸೇವಾ ಪೂರೈಕೆದಾರ ಸಂಸ್ಥೆಗಳಿಗೆ 1 ಕೋಟಿ ರೂ.ಗಳವರೆಗೆ ದಂಡ ವಿಧಿಸುವ ಬಗ್ಗೆ ಪ್ರಸ್ತಾವವಿದೆ. ಅಂತಹ ಸಂಸ್ಥೆಗಳು ಅಕ್ರಮ ಎಸಗಿರುವುದು ಸಾಬೀತಾದರೆ ನಾಲ್ಕು ವರ್ಷಗಳವರೆಗೆ ಸಾರ್ವಜನಿಕ ಪರೀಕ್ಷೆಗಳನ್ನು ಆಯೋಜಿಸುವುದನ್ನು ನಿರ್ಬಂಧಿಸಲಾಗುವುದು.
5.ಪರೀಕ್ಷಾ ಅಕ್ರಮಗಳಲ್ಲಿ ತೊಡಗುವ ಸಂಘಟಿತ ಗ್ಯಾಂಗ್, ಮಾಫಿಯಾಗಳನ್ನು ನಿಯಂತ್ರಿಸುವ ಉದ್ದೇಶವನ್ನು ಮಸೂದೆ ಹೊಂದಿದೆ.
6.ಪ್ರಶ್ನೆ ಪತ್ರಿಕೆ ಸೋರಿಕೆಯ ತನಿಖೆಯನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿ ನಡೆಸಲಿದ್ದಾರೆ. ತನಿಖೆಯನ್ನು ಯಾವುದೇ ಕೇಂದ್ರ ಸಂಸ್ಥೆಗೆ ಒಪ್ಪಿಸುವ ಅಧಿಕಾರ ಕೇಂದ್ರ ಸರ್ಕಾರದ ಬಳಿಯೇ ಇರಲಿದೆ.
7.ಈ ಕಾಯಿದೆ ಅಭ್ಯರ್ಥಿಯ ರಕ್ಷಣೆಗೆ ಒತ್ತು ನೀಡುತ್ತದೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…