BREAKING NEWS

ಸರ್ಕಾರಿ ಪರೀಕ್ಷಾ ಅಕ್ರಮಕ್ಕೆ ಸಾಭೀತಾದರೆ 10 ವರ್ಷ ಜೈಲು, 1 ಕೋಟಿ ದಂಡ!

ನವದೆಹಲಿ: ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳು ಮತ್ತು ಅಕ್ರಮಗಳ ವಿರುದ್ಧ ಕಠಿಣವಾಗಿ ವ್ಯವಹರಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು.

ಈ ಮಸೂದೆಯಲ್ಲಿ ಸರ್ಕಾರಿ ಪರೀಕ್ಷಾ ಅಕ್ರಮ ಸಾಬೀತಾದರೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ ದಂಡ ಹೇರಲಾಗುತ್ತದೆ.

ವಿರೋಧ ಪಕ್ಷದ ಸದಸ್ಯರು ಪ್ರಸ್ತಾಪಿಸಿದ ಕೆಲವು ತಿದ್ದುಪಡಿಗಳನ್ನು ತಿರಸ್ಕರಿಸಿದ ನಂತರ ಲೋಕಸಭೆಯು ಮಸೂದೆಯನ್ನು ಅಂಗೀಕರಿಸಿತು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಕಲು, ಅಕ್ರಮ ತಡೆಗಾಗಿ ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿದ ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ವಿಧೇಯಕಕ್ಕೆ ಅಂಗೀಕಾರ ದೊರೆತಿದೆ.

ವಿಧೇಯಕಕ್ಕೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದ್ದು, ಬಳಿಕ ರಾಜ್ಯಸಭೆಯಲ್ಲಿ ಮಂಡಿಸಲಾಗುತ್ತದೆ. ರಾಜ್ಯಸಭೆಯಲ್ಲೂ ಅಂಗೀಕಾರ ದೊರೆತ ನಂತರ ರಾಷ್ಟ್ರಪತಿ ಸಹಿಗೆ ಕಳುಹಿಸಲಾಗುತ್ತದೆ. ರಾಷ್ಟ್ರಪತಿ ಅಂಗೀಕಾರದ ಬಳಿಕ ವಿಧೇಯಕವು ಕಾಯ್ದೆಯಾಗಿ ಜಾರಿಗೆ ಬರಲಿದೆ.

ವಿಧೇಯಕದಲ್ಲಿನ ಪ್ರಮುಖಾಂಶಗಳು
1.ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡುವವರಿಗೆ ಕನಿಷ್ಠ 3-5 ವರ್ಷಗಳ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ ಸೇರಿದಂತೆ ಕಠಿಣ ಕ್ರಮಗಳನ್ನು ಸೂಚಿಸುತ್ತದೆ. ಸಂಘಟಿತ ಅಪರಾಧ ಪ್ರಕರಣಗಳಲ್ಲಿ 5-10 ವರ್ಷಗಳ ಸಜೆ, 1 ಕೋಟಿ ರೂ. ದಂಡ ದೊರೆಯಲಿದೆ.
2. ಈ ಕಾನೂನಿನ ವ್ಯಾಪ್ತಿಯು ಕೇಂದ್ರ ಮತ್ತು ರಾಜ್ಯ ಲೋಕಸೇವಾ ಆಯೋಗಗಳು, ರೈಲ್ವೆ ಮತ್ತು ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ಸೇರಿ ವಿವಿಧ ಸಾರ್ವಜನಿಕ ಪರೀಕ್ಷೆಗಳನ್ನು ಒಳಗೊಂಡಿದೆ.
3.ಶಿಕ್ಷಣ ಸಂಸ್ಥೆಗಳು ಅಕ್ರಮಗಳಲ್ಲಿ ತೊಡಗಿದ್ದರೆ ಆಸ್ತಿಯ ಜಪ್ತಿಯ ಜತೆಗೆ ಪರೀಕ್ಷಾ ವೆಚ್ಚ ವಸೂಲಿ ಮಾಡಲಾಗುವುದು.
4.ಅಕ್ರಮಗಳು ಕಂಡುಬಂದರೆ ಪರೀಕ್ಷೆಗಳನ್ನು ನಡೆಸುವ ಸೇವಾ ಪೂರೈಕೆದಾರ ಸಂಸ್ಥೆಗಳಿಗೆ 1 ಕೋಟಿ ರೂ.ಗಳವರೆಗೆ ದಂಡ ವಿಧಿಸುವ ಬಗ್ಗೆ ಪ್ರಸ್ತಾವವಿದೆ. ಅಂತಹ ಸಂಸ್ಥೆಗಳು ಅಕ್ರಮ ಎಸಗಿರುವುದು ಸಾಬೀತಾದರೆ ನಾಲ್ಕು ವರ್ಷಗಳವರೆಗೆ ಸಾರ್ವಜನಿಕ ಪರೀಕ್ಷೆಗಳನ್ನು ಆಯೋಜಿಸುವುದನ್ನು ನಿರ್ಬಂಧಿಸಲಾಗುವುದು.
5.ಪರೀಕ್ಷಾ ಅಕ್ರಮಗಳಲ್ಲಿ ತೊಡಗುವ ಸಂಘಟಿತ ಗ್ಯಾಂಗ್‌, ಮಾಫಿಯಾಗಳನ್ನು ನಿಯಂತ್ರಿಸುವ ಉದ್ದೇಶವನ್ನು ಮಸೂದೆ ಹೊಂದಿದೆ.
6.ಪ್ರಶ್ನೆ ಪತ್ರಿಕೆ ಸೋರಿಕೆಯ ತನಿಖೆಯನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿ ನಡೆಸಲಿದ್ದಾರೆ. ತನಿಖೆಯನ್ನು ಯಾವುದೇ ಕೇಂದ್ರ ಸಂಸ್ಥೆಗೆ ಒಪ್ಪಿಸುವ ಅಧಿಕಾರ ಕೇಂದ್ರ ಸರ್ಕಾರದ ಬಳಿಯೇ ಇರಲಿದೆ.
7.ಈ ಕಾಯಿದೆ ಅಭ್ಯರ್ಥಿಯ ರಕ್ಷಣೆಗೆ ಒತ್ತು ನೀಡುತ್ತದೆ.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

5 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

11 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

11 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

11 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

11 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago