BREAKING NEWS

ಸರ್ಕಾರಿ ಪರೀಕ್ಷಾ ಅಕ್ರಮಕ್ಕೆ ಸಾಭೀತಾದರೆ 10 ವರ್ಷ ಜೈಲು, 1 ಕೋಟಿ ದಂಡ!

ನವದೆಹಲಿ: ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳು ಮತ್ತು ಅಕ್ರಮಗಳ ವಿರುದ್ಧ ಕಠಿಣವಾಗಿ ವ್ಯವಹರಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು.

ಈ ಮಸೂದೆಯಲ್ಲಿ ಸರ್ಕಾರಿ ಪರೀಕ್ಷಾ ಅಕ್ರಮ ಸಾಬೀತಾದರೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ ದಂಡ ಹೇರಲಾಗುತ್ತದೆ.

ವಿರೋಧ ಪಕ್ಷದ ಸದಸ್ಯರು ಪ್ರಸ್ತಾಪಿಸಿದ ಕೆಲವು ತಿದ್ದುಪಡಿಗಳನ್ನು ತಿರಸ್ಕರಿಸಿದ ನಂತರ ಲೋಕಸಭೆಯು ಮಸೂದೆಯನ್ನು ಅಂಗೀಕರಿಸಿತು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಕಲು, ಅಕ್ರಮ ತಡೆಗಾಗಿ ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿದ ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ವಿಧೇಯಕಕ್ಕೆ ಅಂಗೀಕಾರ ದೊರೆತಿದೆ.

ವಿಧೇಯಕಕ್ಕೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದ್ದು, ಬಳಿಕ ರಾಜ್ಯಸಭೆಯಲ್ಲಿ ಮಂಡಿಸಲಾಗುತ್ತದೆ. ರಾಜ್ಯಸಭೆಯಲ್ಲೂ ಅಂಗೀಕಾರ ದೊರೆತ ನಂತರ ರಾಷ್ಟ್ರಪತಿ ಸಹಿಗೆ ಕಳುಹಿಸಲಾಗುತ್ತದೆ. ರಾಷ್ಟ್ರಪತಿ ಅಂಗೀಕಾರದ ಬಳಿಕ ವಿಧೇಯಕವು ಕಾಯ್ದೆಯಾಗಿ ಜಾರಿಗೆ ಬರಲಿದೆ.

ವಿಧೇಯಕದಲ್ಲಿನ ಪ್ರಮುಖಾಂಶಗಳು
1.ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡುವವರಿಗೆ ಕನಿಷ್ಠ 3-5 ವರ್ಷಗಳ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ ಸೇರಿದಂತೆ ಕಠಿಣ ಕ್ರಮಗಳನ್ನು ಸೂಚಿಸುತ್ತದೆ. ಸಂಘಟಿತ ಅಪರಾಧ ಪ್ರಕರಣಗಳಲ್ಲಿ 5-10 ವರ್ಷಗಳ ಸಜೆ, 1 ಕೋಟಿ ರೂ. ದಂಡ ದೊರೆಯಲಿದೆ.
2. ಈ ಕಾನೂನಿನ ವ್ಯಾಪ್ತಿಯು ಕೇಂದ್ರ ಮತ್ತು ರಾಜ್ಯ ಲೋಕಸೇವಾ ಆಯೋಗಗಳು, ರೈಲ್ವೆ ಮತ್ತು ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ಸೇರಿ ವಿವಿಧ ಸಾರ್ವಜನಿಕ ಪರೀಕ್ಷೆಗಳನ್ನು ಒಳಗೊಂಡಿದೆ.
3.ಶಿಕ್ಷಣ ಸಂಸ್ಥೆಗಳು ಅಕ್ರಮಗಳಲ್ಲಿ ತೊಡಗಿದ್ದರೆ ಆಸ್ತಿಯ ಜಪ್ತಿಯ ಜತೆಗೆ ಪರೀಕ್ಷಾ ವೆಚ್ಚ ವಸೂಲಿ ಮಾಡಲಾಗುವುದು.
4.ಅಕ್ರಮಗಳು ಕಂಡುಬಂದರೆ ಪರೀಕ್ಷೆಗಳನ್ನು ನಡೆಸುವ ಸೇವಾ ಪೂರೈಕೆದಾರ ಸಂಸ್ಥೆಗಳಿಗೆ 1 ಕೋಟಿ ರೂ.ಗಳವರೆಗೆ ದಂಡ ವಿಧಿಸುವ ಬಗ್ಗೆ ಪ್ರಸ್ತಾವವಿದೆ. ಅಂತಹ ಸಂಸ್ಥೆಗಳು ಅಕ್ರಮ ಎಸಗಿರುವುದು ಸಾಬೀತಾದರೆ ನಾಲ್ಕು ವರ್ಷಗಳವರೆಗೆ ಸಾರ್ವಜನಿಕ ಪರೀಕ್ಷೆಗಳನ್ನು ಆಯೋಜಿಸುವುದನ್ನು ನಿರ್ಬಂಧಿಸಲಾಗುವುದು.
5.ಪರೀಕ್ಷಾ ಅಕ್ರಮಗಳಲ್ಲಿ ತೊಡಗುವ ಸಂಘಟಿತ ಗ್ಯಾಂಗ್‌, ಮಾಫಿಯಾಗಳನ್ನು ನಿಯಂತ್ರಿಸುವ ಉದ್ದೇಶವನ್ನು ಮಸೂದೆ ಹೊಂದಿದೆ.
6.ಪ್ರಶ್ನೆ ಪತ್ರಿಕೆ ಸೋರಿಕೆಯ ತನಿಖೆಯನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿ ನಡೆಸಲಿದ್ದಾರೆ. ತನಿಖೆಯನ್ನು ಯಾವುದೇ ಕೇಂದ್ರ ಸಂಸ್ಥೆಗೆ ಒಪ್ಪಿಸುವ ಅಧಿಕಾರ ಕೇಂದ್ರ ಸರ್ಕಾರದ ಬಳಿಯೇ ಇರಲಿದೆ.
7.ಈ ಕಾಯಿದೆ ಅಭ್ಯರ್ಥಿಯ ರಕ್ಷಣೆಗೆ ಒತ್ತು ನೀಡುತ್ತದೆ.

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

14 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

17 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

18 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

19 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

19 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

19 hours ago