BREAKING NEWS

ಸರ್ಕಾರಿ ಪರೀಕ್ಷಾ ಅಕ್ರಮಕ್ಕೆ ಸಾಭೀತಾದರೆ 10 ವರ್ಷ ಜೈಲು, 1 ಕೋಟಿ ದಂಡ!

ನವದೆಹಲಿ: ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳು ಮತ್ತು ಅಕ್ರಮಗಳ ವಿರುದ್ಧ ಕಠಿಣವಾಗಿ ವ್ಯವಹರಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು.

ಈ ಮಸೂದೆಯಲ್ಲಿ ಸರ್ಕಾರಿ ಪರೀಕ್ಷಾ ಅಕ್ರಮ ಸಾಬೀತಾದರೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ ದಂಡ ಹೇರಲಾಗುತ್ತದೆ.

ವಿರೋಧ ಪಕ್ಷದ ಸದಸ್ಯರು ಪ್ರಸ್ತಾಪಿಸಿದ ಕೆಲವು ತಿದ್ದುಪಡಿಗಳನ್ನು ತಿರಸ್ಕರಿಸಿದ ನಂತರ ಲೋಕಸಭೆಯು ಮಸೂದೆಯನ್ನು ಅಂಗೀಕರಿಸಿತು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಕಲು, ಅಕ್ರಮ ತಡೆಗಾಗಿ ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿದ ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ವಿಧೇಯಕಕ್ಕೆ ಅಂಗೀಕಾರ ದೊರೆತಿದೆ.

ವಿಧೇಯಕಕ್ಕೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದ್ದು, ಬಳಿಕ ರಾಜ್ಯಸಭೆಯಲ್ಲಿ ಮಂಡಿಸಲಾಗುತ್ತದೆ. ರಾಜ್ಯಸಭೆಯಲ್ಲೂ ಅಂಗೀಕಾರ ದೊರೆತ ನಂತರ ರಾಷ್ಟ್ರಪತಿ ಸಹಿಗೆ ಕಳುಹಿಸಲಾಗುತ್ತದೆ. ರಾಷ್ಟ್ರಪತಿ ಅಂಗೀಕಾರದ ಬಳಿಕ ವಿಧೇಯಕವು ಕಾಯ್ದೆಯಾಗಿ ಜಾರಿಗೆ ಬರಲಿದೆ.

ವಿಧೇಯಕದಲ್ಲಿನ ಪ್ರಮುಖಾಂಶಗಳು
1.ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡುವವರಿಗೆ ಕನಿಷ್ಠ 3-5 ವರ್ಷಗಳ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ ಸೇರಿದಂತೆ ಕಠಿಣ ಕ್ರಮಗಳನ್ನು ಸೂಚಿಸುತ್ತದೆ. ಸಂಘಟಿತ ಅಪರಾಧ ಪ್ರಕರಣಗಳಲ್ಲಿ 5-10 ವರ್ಷಗಳ ಸಜೆ, 1 ಕೋಟಿ ರೂ. ದಂಡ ದೊರೆಯಲಿದೆ.
2. ಈ ಕಾನೂನಿನ ವ್ಯಾಪ್ತಿಯು ಕೇಂದ್ರ ಮತ್ತು ರಾಜ್ಯ ಲೋಕಸೇವಾ ಆಯೋಗಗಳು, ರೈಲ್ವೆ ಮತ್ತು ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ಸೇರಿ ವಿವಿಧ ಸಾರ್ವಜನಿಕ ಪರೀಕ್ಷೆಗಳನ್ನು ಒಳಗೊಂಡಿದೆ.
3.ಶಿಕ್ಷಣ ಸಂಸ್ಥೆಗಳು ಅಕ್ರಮಗಳಲ್ಲಿ ತೊಡಗಿದ್ದರೆ ಆಸ್ತಿಯ ಜಪ್ತಿಯ ಜತೆಗೆ ಪರೀಕ್ಷಾ ವೆಚ್ಚ ವಸೂಲಿ ಮಾಡಲಾಗುವುದು.
4.ಅಕ್ರಮಗಳು ಕಂಡುಬಂದರೆ ಪರೀಕ್ಷೆಗಳನ್ನು ನಡೆಸುವ ಸೇವಾ ಪೂರೈಕೆದಾರ ಸಂಸ್ಥೆಗಳಿಗೆ 1 ಕೋಟಿ ರೂ.ಗಳವರೆಗೆ ದಂಡ ವಿಧಿಸುವ ಬಗ್ಗೆ ಪ್ರಸ್ತಾವವಿದೆ. ಅಂತಹ ಸಂಸ್ಥೆಗಳು ಅಕ್ರಮ ಎಸಗಿರುವುದು ಸಾಬೀತಾದರೆ ನಾಲ್ಕು ವರ್ಷಗಳವರೆಗೆ ಸಾರ್ವಜನಿಕ ಪರೀಕ್ಷೆಗಳನ್ನು ಆಯೋಜಿಸುವುದನ್ನು ನಿರ್ಬಂಧಿಸಲಾಗುವುದು.
5.ಪರೀಕ್ಷಾ ಅಕ್ರಮಗಳಲ್ಲಿ ತೊಡಗುವ ಸಂಘಟಿತ ಗ್ಯಾಂಗ್‌, ಮಾಫಿಯಾಗಳನ್ನು ನಿಯಂತ್ರಿಸುವ ಉದ್ದೇಶವನ್ನು ಮಸೂದೆ ಹೊಂದಿದೆ.
6.ಪ್ರಶ್ನೆ ಪತ್ರಿಕೆ ಸೋರಿಕೆಯ ತನಿಖೆಯನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿ ನಡೆಸಲಿದ್ದಾರೆ. ತನಿಖೆಯನ್ನು ಯಾವುದೇ ಕೇಂದ್ರ ಸಂಸ್ಥೆಗೆ ಒಪ್ಪಿಸುವ ಅಧಿಕಾರ ಕೇಂದ್ರ ಸರ್ಕಾರದ ಬಳಿಯೇ ಇರಲಿದೆ.
7.ಈ ಕಾಯಿದೆ ಅಭ್ಯರ್ಥಿಯ ರಕ್ಷಣೆಗೆ ಒತ್ತು ನೀಡುತ್ತದೆ.

andolanait

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

8 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

9 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

13 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

14 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

15 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

16 hours ago