Mysore
33
overcast clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

ನೂರಕ್ಕೆ ನೂರು ಹೆಚ್‌ಡಿಕೆ ಮಂಡ್ಯ ಅಭ್ಯರ್ಥಿ : ಸಿ.ಎಸ್‌.ಪುಟ್ಟರಾಜು

ಮಂಡ್ಯ : ನೂರ್ಕೆ ನೂರು ಭಾಗ ಹೆಚ್‌.ಡಿ.ಕುಮಾರಸ್ವಾಮಿ  ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್‌. ಪುಟ್ಟರಾಜು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ನೂರಕ್ಕೆ ನೂರು ಭಾಗ ಹೆಚ್‌,ಡಿ.ಕುಮಾರಸ್ವಾಮಿ ಕಣಕಿಳಿಯಲಿದ್ದಾರೆ. ಅವರನ್ನು ಗೆಲ್ಲಿಸಿಕೊಂಡು ಬರುವ ಜವಬ್ಧಾರಿ ನನ್ನದು ಎಂದು ತಿಳಿಸಿದ್ದಾರೆ.

ನಾನೇ ಚುನಾವಣಾ ಪ್ರಚಾರದ ನೇತೃತ್ವ ಒಹಿಸುತ್ತೇನೆ. ಪ್ರಚಂಡ ಬಹುಮತದಿಂದ ಗೆಲ್ಲಿಸಿಕೊಂಡು ಬರುತ್ತೇನೆ. ಕುಮಾರಸ್ವಾಮಿ ಅವರನ್ನು ಕೇಲ ನಾಮಪತ್ರ ಸಲ್ಲಿಕೆಗೆ ಮಾತ್ರ ಕರಿಸುತ್ತೇವೆ ಎಂದು ತಿಳಿಸಿದರು.

ಎನ್‌ಡಿಎ ಮೈತ್ರೀಕೂಟದ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಲು ಮಂಡ್ಯದ ಎಂಟು ವಿಧಾನಸಭಾ ಕ್ಷೇತ್ರ ಜನರು ಗೆಲ್ಲಿಸಿ ಕಳಿಸಲು ತುದಿಗಾಲಲ್ಲಿ ನಿಂತಿದ್ದಾರೆ ಎಂದರು.

 

Tags:
error: Content is protected !!