BREAKING NEWS

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 104 ಹೊಸ ಕೊವಿಡ್‌ ಪ್ರಕರಣ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆ

ನೆರೆಯ ಕೇರಳದಲ್ಲಿ ಕೊವಿಡ್‌ ಹೊಸ ರೂಪಾಂತರ ಜೆಎನ್‌ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅತ್ತ ದಿನದಿಂದ ದಿನಕ್ಕೆ ರಾಜ್ಯದಲ್ಲಿಯೂ ಕೊವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ.

ರಾಜ್ಯದಲ್ಲಿ ಇಂದು ( ಡಿಸೆಂಬರ್‌ 23 ) ಒಟ್ಟು 104 ಹೊಸ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಂಚಿಕೊಂಡಿರುವ ವರದಿ ಪ್ರಕಾರ ಇಂದು 104 ಹೊಸ ಪ್ರಕರಣಗಳು ವರದಿಯಾಗಿದ್ದರೆ, 8 ಜನ ಡಿಸ್‌ಚಾರ್ಜ್‌ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದ್ದು, ಕೊನೆಯ 24 ಗಂಟೆಗಳಲ್ಲಿ 1752 ಟೆಸ್ಟ್‌ಗಳು ನಡೆದಿವೆ, 1195 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 557 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 5.93% ಇದೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

ಒಟ್ಟು 271 ಸಕ್ರಿಯ ಪ್ರಕರಣಗಳ ಪೈಕಿ 258 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 13 ಸೋಂಕಿತರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 6 ಸೋಂಕಿತರು ಐಸಿಯುನಲ್ಲಿದ್ದು, 7 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 7, ಮಂಡ್ಯದಲ್ಲಿ 1 ಹಾಗೂ ಚಾಮರಾಜನಗರದಲ್ಲಿ 2 ಹೊಸ ಕೊವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 12, ಮಂಡ್ಯದಲ್ಲಿ 2 ಹಾಗೂ ಚಾಮರಾಜನಗರದಲ್ಲಿ 2 ಸಕ್ರಿಯ ಪ್ರಕರಣಗಳಿವೆ.

andolana

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago