ಟೆಲ್ ಅವಿವ್ : ಹಮಾಸ್ ಉಗ್ರರು ಗಾಜಾ ಪಟ್ಟಿಯಿಂದ ಇಸ್ರೇಲ್ ಮೇಲೆ ಆಕ್ರಮಣ ನಡೆಸಿ ಇಲ್ಲಿಗೆ 3 ದಿನ ಕಳೆದಿದೆ. ಇದರ ಬೆನ್ನಲ್ಲೇ ಇಸ್ರೇಲ್ ಹಮಾಸ್ ವಿರುದ್ಧ ಯುದ್ಧ ಘೋಷಿಸಿದೆ. ಈ 3 ದಿನಗಳ ಸಂಘರ್ಷದಲ್ಲಿ ಎರಡೂ ಕಡೆಗಳಿಂದ ಬರೋಬ್ಬರಿ 1,100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಇಸ್ರೇಲ್ನಲ್ಲಿ 44 ಸೈನಿಕರು ಸೇರಿದಂತೆ 700ಕ್ಕೂ ಹೆಚ್ಚು ಜನರನ್ನು ಕೊಲ್ಲಲಾಗಿದೆ. ಹಮಾಸ್ ಆಕ್ರಮಣದ ವಿರುದ್ಧ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹಾಗೂ ಉಗ್ರಗಾಮಿ ಗುಂಪುಗಳ ಅಡಗುತಾಣಗಳನ್ನು ನಾಶಪಡಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಭಾನುವಾರ ಗಾಜಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಇದರಲ್ಲಿ 413 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ.
ಹಮಾಸ್ ದಾಳಿಗೆ ಒಳಗಾದ ಸಂಗೀತ ಉತ್ಸವದ ಪ್ರದೇಶದಿಂದ ಸುಮಾರು 260 ಶವಗಳನ್ನು ವಶಪಡಿಸಿಕೊಂಡಿರುವುದಾಗಿ ಇಸ್ರೇಲ್ ರಕ್ಷಣಾ ಸೇವೆ ಝಾಕಾ ತಿಳಿಸಿದೆ.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…