BREAKING NEWS

ಸುತ್ತೂರು ಜಾತ್ರಾ ಮಹೋತ್ಸವದ ಸಾಮೂಹಿಕ ವಿವಾಹದಲ್ಲಿ ದಾಂಪತ್ಯಕ್ಕೆ ಕಾಲಿಟ್ಟ ೧೧೮ ಜೋಡಿ

ಮೈಸೂರು: ಸುತ್ತೂರಿನ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಅಂಗವಾಗಿ ಸಾಮೂಹಿಕ ವಿವಾಹ  ನೆರವೇರಿತು.

ಸುತ್ತೂರು ಪೀಠಾಧಿಪತಿ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಕಾಗಿನೆಲೆ‌ ಕನಕಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ತಿರುವನಂತಪುರ ಶಾಂತಗಿರಿ ಆಶ್ರಮದ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿ ಗುರುರತ್ನಂ ಜ್ಞಾನತಪಸ್ವಿ ಸೇರಿದಂತೆ ಹರಗುರುಚರಮೂರ್ತಿಗಳ ದಿವ್ಯ ಸಾನಿಧ್ಯದಲ್ಲಿ 118 ಜೋಡಿಗಳು ದಾಂಪತ್ಯ ಬದುಕಿಗೆ ಕಾಲಿಟ್ಟರು.

ವೀರಶೈವ ಲಿಂಗಾಯತ 04, ಪರಿಶಿಷ್ಟ ಜಾತಿ 61, ಪರಿಶಿಷ್ಟ ಪಂಗಡ 26, ಹಿಂದುಳಿದ ವರ್ಗ 18, ಅಂತರಜಾತಿ 11 ಸೇರಿದಂತೆ ಒಟ್ಟು 118 ಜೋಡಿಗಳು ಸತಿಪತಿಗಳಾದರು. ಒಟ್ಟು 118ರ ಪೈಕಿ ತಮಿಳುನಾಡಿನ ಜೋಡಿಗಳು 23, ವಿಶೇಷ ಚೇತನರು 04 ಹಾಗೂ ಒಂದು ಜೋಡಿ ಮರು ಮದುವೆ ಆಗುವ ಮೂಲಕ ದಾಂಪತ್ಯ ಜೀವನಕ್ಕೆ ಅಡಿಯಿಟ್ಟರು. ಈ ವೇಳೆ ವೇದಿಕೆಯಲ್ಲಿ ಉದ್ಯಮಿ ಮೂಲಚಂದ್, ಶಾಸಕ ರಾಮಮೂರ್ತಿ, ಯುಎಸ್‌ಎ ಮೇರಿಲ್ಯಾಂಡ್ ನ ವಿ. ವೀರಪ್ಪನ್‌, ಅಮೇರಿಕಾದ ವಾಷಿಂಗ್ಟನ್ ನ ಶಿವಾನಂದ್ ಉಪಸ್ಥಿತರಿದ್ದರು.

2000 ರಿಂದ 2023ರವರಗೆ ಶ್ರೀ ಸುತ್ತೂರು ಕ್ಷೇತ್ರದಲ್ಲಿ ಜರುಗಿರುವ ಸಾಮೂಹಿಕ ವಿವಾಹದಲ್ಲಿ 3076 ಜೋಡಿಗಳು ಸತಿಪತಿಗಳಾಗಿದ್ದು, ಪ್ರತಿ ತಿಂಗಳು ಮಾಸಿಕ ವಿವಾಹ ಕಾರ್ಯಕ್ರಮದಲ್ಲಿ 2009 ರಿಂದ 457 ಜೋಡಿಗಳು ಸತಿಪತಿಗಳಾಗಿದ್ದಾರೆ. ಒಟ್ಟಾರೆ ಶ್ರೀ ಸುತ್ತೂರು ಕ್ಷೇತ್ರದಲ್ಲಿ ಇದುವರೆಗೆ ಒಟ್ಟು 3533 ಜೋಡಿಗಳು ವಿವಾಹವಾಗಿದ್ದಾರೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

4 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

4 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

4 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

4 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

4 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

4 hours ago