BREAKING NEWS

ಸುತ್ತೂರು ಜಾತ್ರಾ ಮಹೋತ್ಸವದ ಸಾಮೂಹಿಕ ವಿವಾಹದಲ್ಲಿ ದಾಂಪತ್ಯಕ್ಕೆ ಕಾಲಿಟ್ಟ ೧೧೮ ಜೋಡಿ

ಮೈಸೂರು: ಸುತ್ತೂರಿನ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಅಂಗವಾಗಿ ಸಾಮೂಹಿಕ ವಿವಾಹ  ನೆರವೇರಿತು.

ಸುತ್ತೂರು ಪೀಠಾಧಿಪತಿ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಕಾಗಿನೆಲೆ‌ ಕನಕಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ತಿರುವನಂತಪುರ ಶಾಂತಗಿರಿ ಆಶ್ರಮದ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿ ಗುರುರತ್ನಂ ಜ್ಞಾನತಪಸ್ವಿ ಸೇರಿದಂತೆ ಹರಗುರುಚರಮೂರ್ತಿಗಳ ದಿವ್ಯ ಸಾನಿಧ್ಯದಲ್ಲಿ 118 ಜೋಡಿಗಳು ದಾಂಪತ್ಯ ಬದುಕಿಗೆ ಕಾಲಿಟ್ಟರು.

ವೀರಶೈವ ಲಿಂಗಾಯತ 04, ಪರಿಶಿಷ್ಟ ಜಾತಿ 61, ಪರಿಶಿಷ್ಟ ಪಂಗಡ 26, ಹಿಂದುಳಿದ ವರ್ಗ 18, ಅಂತರಜಾತಿ 11 ಸೇರಿದಂತೆ ಒಟ್ಟು 118 ಜೋಡಿಗಳು ಸತಿಪತಿಗಳಾದರು. ಒಟ್ಟು 118ರ ಪೈಕಿ ತಮಿಳುನಾಡಿನ ಜೋಡಿಗಳು 23, ವಿಶೇಷ ಚೇತನರು 04 ಹಾಗೂ ಒಂದು ಜೋಡಿ ಮರು ಮದುವೆ ಆಗುವ ಮೂಲಕ ದಾಂಪತ್ಯ ಜೀವನಕ್ಕೆ ಅಡಿಯಿಟ್ಟರು. ಈ ವೇಳೆ ವೇದಿಕೆಯಲ್ಲಿ ಉದ್ಯಮಿ ಮೂಲಚಂದ್, ಶಾಸಕ ರಾಮಮೂರ್ತಿ, ಯುಎಸ್‌ಎ ಮೇರಿಲ್ಯಾಂಡ್ ನ ವಿ. ವೀರಪ್ಪನ್‌, ಅಮೇರಿಕಾದ ವಾಷಿಂಗ್ಟನ್ ನ ಶಿವಾನಂದ್ ಉಪಸ್ಥಿತರಿದ್ದರು.

2000 ರಿಂದ 2023ರವರಗೆ ಶ್ರೀ ಸುತ್ತೂರು ಕ್ಷೇತ್ರದಲ್ಲಿ ಜರುಗಿರುವ ಸಾಮೂಹಿಕ ವಿವಾಹದಲ್ಲಿ 3076 ಜೋಡಿಗಳು ಸತಿಪತಿಗಳಾಗಿದ್ದು, ಪ್ರತಿ ತಿಂಗಳು ಮಾಸಿಕ ವಿವಾಹ ಕಾರ್ಯಕ್ರಮದಲ್ಲಿ 2009 ರಿಂದ 457 ಜೋಡಿಗಳು ಸತಿಪತಿಗಳಾಗಿದ್ದಾರೆ. ಒಟ್ಟಾರೆ ಶ್ರೀ ಸುತ್ತೂರು ಕ್ಷೇತ್ರದಲ್ಲಿ ಇದುವರೆಗೆ ಒಟ್ಟು 3533 ಜೋಡಿಗಳು ವಿವಾಹವಾಗಿದ್ದಾರೆ.

andolanait

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

8 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

8 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

8 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

8 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

8 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

8 hours ago