BREAKING NEWS

ಆರ್‌ಸಿಬಿ ಮಾಡಿದ ತಪ್ಪಿನಿಂದ ಫಾಫ್‌ ಡು ಪ್ಲೆಸಿಸ್‌ಗೆ 12 ಲಕ್ಷ ರೂ. ದಂಡ

ಬೆಂಗಳೂರು : ಲಖನೌ ಸೂಪರ್‌ ಜಯಂಟ್ಸ್‌ ವಿರುದ್ದ 2023ರ ಇಂಡಿಯನ್ ಪ್ರೀಮಿಯರ್‌ ಲೀಗ್‌ (IPL) ಟೂರ್ನಿಯ 15ನೇ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್‌ ಕಾರಣದಿಂದಾಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್‌ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಸೋಮವಾರ ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಆರ್‌ಸಿಬಿ, ತನ್ನ ಪಾಲಿನ 20 ಓವರ್‌ಗಳಿಗೆ 212 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಎದುರಾಳಿ ಲಖನೌ ಸೂಪರ್‌ ಜಯಂಟ್ಸ್ ತಂಡಕ್ಕೆ 213 ರನ್‌ಗಳ ಬೃಹತ್‌ ಮೊತ್ತದ ಗುರಿಯನ್ನು ನೀಡಿತ್ತು. ಬಳಿಕ ಗುರಿ ಹಿಂಬಾಲಿಸಿದ ಲಖನೌ ಸೂಪರ್‌ ಜಯಂಟ್ಸ್‌ ತಂಡ ಕೇವಲ ಒಂದು ವಿಕೆಟ್‌ನಿಂದ ರೋಚಕ ಗೆಲುವು ಸಾಧಿಸಿತ್ತು.

ಅಂದಹಾಗೆ ಲಖನೌ ಸೂಪರ್‌ ಜಯಂಟ್ಸ್‌ ಇನಿಂಗ್ಸ್‌ನಲ್ಲಿ ನಿಗದಿತ ಸಮಯಕ್ಕೆ 20 ಓವರ್‌ಗಳನ್ನು ಪೂರ್ಣಗೊಳಿಸುವಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ನಾಯಕ ಫಾಫ್‌ ಡು ಪ್ಲೆಸಿಸ್‌ ಅವರಿಗೆ 12 ಲಕ್ಷ ರೂ. ದಂಡವನ್ನು ಐಪಿಎಲ್ ಅಧಿಕಾರಿಗಳು ವಿಧಿಸಿದ್ದಾರೆ.ನಿಗದಿತ ಸಮಯದಲ್ಲಿ 20 ಓವರ್‌ಗಳನ್ನು ಪೂರ್ಣಗೊಳಿಸುವಲ್ಲಿ ವಿಫಲವಾದ ಆರ್‌ಸಿಬಿ, ಐಪಿಎಲ್‌ ಮೊದಲನೇ ಹಂತದ ನಿಯಮವನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ತಂಡದ ನಾಯಕ ಫಾಫ್‌ ಡು ಪ್ಲೆಸಿಸ್‌ಗೆ 12 ಲಕ್ಷ ರೂ. ದಂಡವನ್ನು ವಧಿಸಲಾಗಿದೆ. ಈ ವಿಷಯದಲ್ಲಿ ಪಂದ್ಯದ ರೆಫರಿಗಳ ತೀರ್ಮಾನ ಅಂತಿಮವಾಗಿದೆ. ಪ್ರಸಕ್ತ ಟೂರ್ನಿಯಲ್ಲಿ ಆರ್‌ಸಿಬಿ ತಂಡದ ಮೊದಲ ಪ್ರಕರಣ ಇದಾಗಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಆವೇಶ್‌ ಖಾನ್‌ಗೆ ಛೀಮಾರಿ ಹಾಕಿದ ಐಪಿಎಲ್‌ : ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ ಒಂದು ರನ್‌ ಬೈಸ್‌ ಓಡಿದ ಬೆನ್ನಲ್ಲೆ ಲಖನೌ ಸೂಪರ್ ಜಯಂಟ್ಸ್‌ ತಂಡ ಒಂದು ವಿಕೆಟ್‌ ರೋಚಕ ಗೆಲುವನ್ನು ತನ್ನದಾಗಿಸಿಕೊಂಡಿತು. ಈ ವೇಳೆ ಒಂದು ರನ್‌ ಪೂರ್ಣಗೊಳಿಸಿದ ಬಳಿಕ ಆವೇಶ್‌ ಖಾನ್ ತನ್ನ ಹೆಲ್ಮೆಟ್‌ ಅನ್ನು ನೆಲಕ್ಕೆ ಜೋರಾಗಿ ಹೊಡೆದರು. ಈ ಹಿನ್ನೆಲೆಯಲ್ಲಿ ಯುವ ವೇಗಿಗೆ ಛೀಮಾರಿಯನ್ನು ಹಾಕಲಾಗಿದೆ. “ಲಖನೌ ಸೂಪರ್‌ ಜಯಂಟ್ಸ್ ತಂಡದ ಆವೇಶ್‌ ಖಾನ್‌ ಅವರು ಐಪಿಎಲ್‌ ಕೋಡ್‌ ಆಫ್ ಕಂಡಕ್ಟ್‌ನ 2.2ಕ್ಕೆ ಸಂಬಂಧಿಸಿದಂತೆ ಮೊದಲ ಹಂತದ ನಿಯಮವನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಛೀಮಾರಿ ಹಾಕಲಾಗಿದೆ. ಇದನ್ನು ಅವರು ಕೂಡ ಸ್ವೀಕರಿಸಿದ್ದಾರೆ,” ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕೊನೆಯ ಓವರ್‌ನಲ್ಲಿ ಹೈ-ಡ್ರಾಮಾ : ಸೋಮವಾರ ರಾತ್ರಿ ಬೆಂಗಳೂರು ಹಾಗೂ ಲಖನೌ ನಡುವಣ ಪಂದ್ಯ ಅತ್ಯಂತ ರೋಚಕತೆಯಿಂದ ಕೂಡಿತ್ತು. 20ನೇ ಓವರ್‌ನಲ್ಲಿ 5 ರನ್‌ ಅಗತ್ಯವಿದ್ದಾಗ ಮಾರ್ಕ್‌ವುಡ್‌ ಹಾಗೂ ಜಯದೇವ್‌ ಉನಾದ್ಕಟ್‌ ಅವರು ವಿಕೆಟ್‌ ಒಪ್ಪಿಸಿದ್ದರು. ಇದರ ನಡುವೆ ಕೊನೆಯ ಎಸೆತದಲ್ಲಿ ಒಂದು ರನ್‌ ಅಗತ್ಯವಿದ್ದಾಗ, ಹರ್ಷಲ್‌ ಪಟೇಲ್‌ ಮಂಕಡಿಂಗ್‌ ರನ್‌ಔಟ್‌ ಮಾಡಬಹುದಾದ ಅವಕಾಶವನ್ನು ಕೈಚೆಲ್ಲಿಕೊಳ್ಳುತ್ತಾರೆ. ಅಂತಿಮವಾಗಿ ಬೈಸ್‌ ರೂಪದಲ್ಲಿ ಒಂದು ರನ್‌ ಪಡೆಯುವ ಮೂಲಕ ಲಖನೌ ಒಂದು ವಿಕೆಟ್‌ ರೋಚಕ ಗೆಲುವು ತನ್ನದಾಗಿಸಿಕೊಳ್ಳುತ್ತದೆ.

lokesh

Recent Posts

ಮಾಂದಲಪಟ್ಟಿಯಲ್ಲಿ ಮುಂದುವರಿದ ರಸ್ತೆ ದುರಸ್ತಿ ಕಾರ್ಯ

ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…

21 mins ago

ಜಿಲ್ಲೆಯಲ್ಲಿ ಜಾನುವಾರುಗಳ ಮೇವು-ನೀರಿಗಿಲ್ಲ ಬರ!

ಮುಂದಿನ 34 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು; ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯೂ ದೂರ ಕೆ.ಬಿ.ರಮೇಶ ನಾಯಕ ಮೈಸೂರು :…

39 mins ago

ಆರ್.ಟಿ.ವಿಠಲಮೂರ್ತಿ ಅವರ ಬೆಂಗಳೂರು ಡೈರಿ ; ಸಂಪುಟ ಪುನರಚನೆಗೆ ಸಜ್ಜಾದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…

54 mins ago

ಮಾಗುಡಿಲು ಗ್ರಾಮಕ್ಕೆ ಸಂಜೆಯ ನಂತರ ಬಸ್‌ ಇಲ್ಲದೆ ತೊಂದರೆ

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…

2 hours ago

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

3 hours ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

4 hours ago