ಮುಂಬೈ : ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಸಿಲಿನ ತಾಪ ತಾಳಲಾರದೇ 14 ಜನರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಏಕನಾಥ ಶಿಂದೆ ಸರ್ಕಾರವನ್ನು ವಜಾಗೊಳಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ರಾಜ್ಯಪಾಲ ರಮೇಶ್ ಬೈಸ್ ಅವರನ್ನು ಒತ್ತಾಯಿಸಿದ್ದಾರೆ.
ಮುಂಬೈನ ಖಾರ್ಘರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನರು ಮೃತಪಟ್ಟಿರುವ ಬಗ್ಗೆ ಟ್ವಿಟರ್ನಲ್ಲಿ ವಾಗ್ದಾಳಿ ನಡೆಸಿರುವ ಅವರು, ‘ಇವು ಕಾಲ್ತುಳಿತದಿಂದ ಸಂಭವಿಸಿದ ಸಾವೇ? ಸರ್ಕಾರ ಏನನ್ನು ಮುಚ್ಚಿಡಲು ಯತ್ನಿಸುತ್ತಿದೆ’ ಎಂದು ಪ್ರಶ್ನಿಸಿದ್ದಾರೆ. ಇದರೊಂದಿಗೆ ಕಾರ್ಯಕ್ರಮದ ವಿಡಿಯೊವನ್ನು ಲಗತ್ತಿಸಿದ್ದಾರೆ. ಅದರಲ್ಲಿ ಜನರು ತೀವ್ರ ಬಳಲಿರುವ, ನಿತ್ರಾಣಗೊಂಡಿರುವ ದೃಶ್ಯವಿದೆ.
‘ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಸರ್ಕಾರವನ್ನು ವಜಾ ಮಾಡಬೇಕು’ ಎಂದು ಆಗ್ರಹ ಮಾಡಿದ್ದಾರೆ.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…