BREAKING NEWS

ಭಾರತದಲ್ಲಿ ಕಳೆದ 9 ತಿಂಗಳ ಅವಧಿಯಲ್ಲಿ 145 ಹುಲಿಗಳ ಸಾವು

ಚಾಮರಾಜನಗರ : ಈಗ ಎಲ್ಲೆಲ್ಲೂ ಹುಲಿ ಉಗುರಿನದ್ದೇ ಮಾತು, ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ್ದು ಏಕೆ? ಹುಲಿ ಉಗುರಿನ ಹಿಂದಿನ ನಂಬಿಕೆಯ ಹಿಂದೆ ಹಲವರು ಕಾರಣ ಹುಡುಕುತ್ತಿದ್ದಾರೆ. ಆದರೆ ಇದೀಗ ಮತ್ತೊಂದು ಶಾಕಿಂಗ್ ನ್ಯೂಸ್ ಬಹಿರಂಗಗೊಂಡಿದೆ.

ಭಾರತದಲ್ಲಿ ಕಳೆದ 9 ತಿಂಗಳ ಅವಧಿಯಲ್ಲಿ 145 ಹುಲಿಗಳ ಸಾವನ್ನಪ್ಪಿವೆ. ಹುಲಿಗಳ ಸಂಖ್ಯೆಯ ಶೇಕಡಾ 4 ರಷ್ಟು ಹುಲಿಗಳು ಕೇವಲ 9 ತಿಂಗಳಲ್ಲಿ ಮೃತಪಟ್ಟಿವೆ. 2022 ರ ಗಣತಿ ಪ್ರಕಾರ ಭಾರತದ ಹುಲಿಗಳ ಸಂಖ್ಯೆ 3682. 2018 ರಲ್ಲಿ 2967 ಇದ್ದ ಹುಲಿಗಳ ಸಂಖ್ಯೆ 2022 ರಲ್ಲಿ 3682 ಕ್ಕೆ ಏರಿಕೆಯಾಗಿದೆ. ಆದರೆ ಜನವರಿಯಿಂದ ಸೆಪ್ಟೆಂಬರ್ ತಿಂಗಳವರೆಗೆ 145 ಹುಲಿಗಳು ಸಾವನ್ನಪ್ಪಿವೆ.

ಮಹತ್ವದ ಪತ್ರ ಬರೆದ ರಾಜ್ಯಸಭಾ ಸಂಸದ
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರಕ್ಕೆ (ಎನ್‌ಟಿಸಿಎ) ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಬರೆದ ಪತ್ರದಲ್ಲಿ ಈ ಆಘಾತಕಾರಿ ಸುದ್ದಿ ಹೊರಬಿದ್ದಿದೆ.

ಹುಲಿಗಳ ಸಾವಿನ ಬಗ್ಗೆ ತನಿಖೆ ಆರಂಭಿಸಲಾಗಿದೆಯೇ? ಬೇಟೆ ಹಾಗೂ ವಿದ್ಯುದಾಘಾತ ಪ್ರಮುಖ ಕಾರಣಗಳೆಂದು ವರದಿಯಾಗಿದೆ. ಹುಲಿಗಳ ಸಾವಿನ ಸಂಖ್ಯೆ ಕಡಿಮೆ ಮಾಡಲು ತುರ್ತು ಕ್ರಮಗಳೇನು? ಹುಲಿಗಳ ಸಾವಿನ ಬಗ್ಗೆ ವನ್ಯಜೀವಿ ತಜ್ಞರ ಅಭಿಪ್ರಾಯಗಳೇನು? ಈ ಬಗ್ಗೆ 15 ದಿನಗಳ ಒಳಗೆ ಮಾಹಿತಿ ನೀಡಲು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರಕ್ಕೆ ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಸೂಚನೆ ನೀಡಿದ್ದಾರೆ.

ಹುಲಿ ಸಾವಿನ ರಹಸ್ಯವೇನು?
ಹುಲಿಗಳ ಸಾವಿನ ಬಗ್ಗೆ ಎನ್‌ಟಿ‌ಸಿಎ ಪ್ರತಿದಿನ ತನ್ನ ವೆಬ್‌ಸೈಟ್‌ ನಲ್ಲಿ ಮಾಹಿತಿ ಅಪ್‌ಲೋಡ್ ಮಾಡುತ್ತದೆ. ಹುಲಿ ಯಾವ ಕಾರಣದಿಂದ ಸತ್ತಿದೆ, ನೈಸರ್ಗಿಕವಾಗಿ ಮೃತಪಟ್ಟಿತಾ? ಬೇಟೆಯಾಡಲಾಗಿತ್ತಾ? ವಿದ್ಯುದಾಘಾತದಿಂದ ಮೃತಪಟ್ಟಿತಾ ಎಂಬಿತ್ಯಾದಿ ಕಾರಣಗಳನ್ನು ನಮೂದಿಸಲಾಗುತ್ತದೆ.

ಆದರೆ ಇತ್ತೀಚೆಗೆ ಹುಲಿ ಸಾವಿಗೆ ಯಾವುದೇ ಕಾರಣವನ್ನು ಎನ್‌ಟಿ‌ಸಿಎ ನಮೂದಿಸುತ್ತಿಲ್ಲ. ಈ ನಡೆ ಅನುಮಾನಕ್ಕೆ ಕಾರಣವಾಗಿದೆ. ಹುಲಿಗಳು ಅನೈಸರ್ಗಿಕವಾಗಿ ಸತ್ತಿದ್ದರೆ ನಿಜಕ್ಕೂ ಕಳವಳಕಾರಿ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

andolanait

Recent Posts

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

41 seconds ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

8 mins ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

52 mins ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

4 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

4 hours ago