BREAKING NEWS

ಭಾರತದಲ್ಲಿ ಕಳೆದ 9 ತಿಂಗಳ ಅವಧಿಯಲ್ಲಿ 145 ಹುಲಿಗಳ ಸಾವು

ಚಾಮರಾಜನಗರ : ಈಗ ಎಲ್ಲೆಲ್ಲೂ ಹುಲಿ ಉಗುರಿನದ್ದೇ ಮಾತು, ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ್ದು ಏಕೆ? ಹುಲಿ ಉಗುರಿನ ಹಿಂದಿನ ನಂಬಿಕೆಯ ಹಿಂದೆ ಹಲವರು ಕಾರಣ ಹುಡುಕುತ್ತಿದ್ದಾರೆ. ಆದರೆ ಇದೀಗ ಮತ್ತೊಂದು ಶಾಕಿಂಗ್ ನ್ಯೂಸ್ ಬಹಿರಂಗಗೊಂಡಿದೆ.

ಭಾರತದಲ್ಲಿ ಕಳೆದ 9 ತಿಂಗಳ ಅವಧಿಯಲ್ಲಿ 145 ಹುಲಿಗಳ ಸಾವನ್ನಪ್ಪಿವೆ. ಹುಲಿಗಳ ಸಂಖ್ಯೆಯ ಶೇಕಡಾ 4 ರಷ್ಟು ಹುಲಿಗಳು ಕೇವಲ 9 ತಿಂಗಳಲ್ಲಿ ಮೃತಪಟ್ಟಿವೆ. 2022 ರ ಗಣತಿ ಪ್ರಕಾರ ಭಾರತದ ಹುಲಿಗಳ ಸಂಖ್ಯೆ 3682. 2018 ರಲ್ಲಿ 2967 ಇದ್ದ ಹುಲಿಗಳ ಸಂಖ್ಯೆ 2022 ರಲ್ಲಿ 3682 ಕ್ಕೆ ಏರಿಕೆಯಾಗಿದೆ. ಆದರೆ ಜನವರಿಯಿಂದ ಸೆಪ್ಟೆಂಬರ್ ತಿಂಗಳವರೆಗೆ 145 ಹುಲಿಗಳು ಸಾವನ್ನಪ್ಪಿವೆ.

ಮಹತ್ವದ ಪತ್ರ ಬರೆದ ರಾಜ್ಯಸಭಾ ಸಂಸದ
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರಕ್ಕೆ (ಎನ್‌ಟಿಸಿಎ) ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಬರೆದ ಪತ್ರದಲ್ಲಿ ಈ ಆಘಾತಕಾರಿ ಸುದ್ದಿ ಹೊರಬಿದ್ದಿದೆ.

ಹುಲಿಗಳ ಸಾವಿನ ಬಗ್ಗೆ ತನಿಖೆ ಆರಂಭಿಸಲಾಗಿದೆಯೇ? ಬೇಟೆ ಹಾಗೂ ವಿದ್ಯುದಾಘಾತ ಪ್ರಮುಖ ಕಾರಣಗಳೆಂದು ವರದಿಯಾಗಿದೆ. ಹುಲಿಗಳ ಸಾವಿನ ಸಂಖ್ಯೆ ಕಡಿಮೆ ಮಾಡಲು ತುರ್ತು ಕ್ರಮಗಳೇನು? ಹುಲಿಗಳ ಸಾವಿನ ಬಗ್ಗೆ ವನ್ಯಜೀವಿ ತಜ್ಞರ ಅಭಿಪ್ರಾಯಗಳೇನು? ಈ ಬಗ್ಗೆ 15 ದಿನಗಳ ಒಳಗೆ ಮಾಹಿತಿ ನೀಡಲು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರಕ್ಕೆ ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಸೂಚನೆ ನೀಡಿದ್ದಾರೆ.

ಹುಲಿ ಸಾವಿನ ರಹಸ್ಯವೇನು?
ಹುಲಿಗಳ ಸಾವಿನ ಬಗ್ಗೆ ಎನ್‌ಟಿ‌ಸಿಎ ಪ್ರತಿದಿನ ತನ್ನ ವೆಬ್‌ಸೈಟ್‌ ನಲ್ಲಿ ಮಾಹಿತಿ ಅಪ್‌ಲೋಡ್ ಮಾಡುತ್ತದೆ. ಹುಲಿ ಯಾವ ಕಾರಣದಿಂದ ಸತ್ತಿದೆ, ನೈಸರ್ಗಿಕವಾಗಿ ಮೃತಪಟ್ಟಿತಾ? ಬೇಟೆಯಾಡಲಾಗಿತ್ತಾ? ವಿದ್ಯುದಾಘಾತದಿಂದ ಮೃತಪಟ್ಟಿತಾ ಎಂಬಿತ್ಯಾದಿ ಕಾರಣಗಳನ್ನು ನಮೂದಿಸಲಾಗುತ್ತದೆ.

ಆದರೆ ಇತ್ತೀಚೆಗೆ ಹುಲಿ ಸಾವಿಗೆ ಯಾವುದೇ ಕಾರಣವನ್ನು ಎನ್‌ಟಿ‌ಸಿಎ ನಮೂದಿಸುತ್ತಿಲ್ಲ. ಈ ನಡೆ ಅನುಮಾನಕ್ಕೆ ಕಾರಣವಾಗಿದೆ. ಹುಲಿಗಳು ಅನೈಸರ್ಗಿಕವಾಗಿ ಸತ್ತಿದ್ದರೆ ನಿಜಕ್ಕೂ ಕಳವಳಕಾರಿ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

32 mins ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

34 mins ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

43 mins ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

50 mins ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

58 mins ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

1 hour ago