BREAKING NEWS

ಭಾರತದಲ್ಲಿ ಕಳೆದ 9 ತಿಂಗಳ ಅವಧಿಯಲ್ಲಿ 145 ಹುಲಿಗಳ ಸಾವು

ಚಾಮರಾಜನಗರ : ಈಗ ಎಲ್ಲೆಲ್ಲೂ ಹುಲಿ ಉಗುರಿನದ್ದೇ ಮಾತು, ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ್ದು ಏಕೆ? ಹುಲಿ ಉಗುರಿನ ಹಿಂದಿನ ನಂಬಿಕೆಯ ಹಿಂದೆ ಹಲವರು ಕಾರಣ ಹುಡುಕುತ್ತಿದ್ದಾರೆ. ಆದರೆ ಇದೀಗ ಮತ್ತೊಂದು ಶಾಕಿಂಗ್ ನ್ಯೂಸ್ ಬಹಿರಂಗಗೊಂಡಿದೆ.

ಭಾರತದಲ್ಲಿ ಕಳೆದ 9 ತಿಂಗಳ ಅವಧಿಯಲ್ಲಿ 145 ಹುಲಿಗಳ ಸಾವನ್ನಪ್ಪಿವೆ. ಹುಲಿಗಳ ಸಂಖ್ಯೆಯ ಶೇಕಡಾ 4 ರಷ್ಟು ಹುಲಿಗಳು ಕೇವಲ 9 ತಿಂಗಳಲ್ಲಿ ಮೃತಪಟ್ಟಿವೆ. 2022 ರ ಗಣತಿ ಪ್ರಕಾರ ಭಾರತದ ಹುಲಿಗಳ ಸಂಖ್ಯೆ 3682. 2018 ರಲ್ಲಿ 2967 ಇದ್ದ ಹುಲಿಗಳ ಸಂಖ್ಯೆ 2022 ರಲ್ಲಿ 3682 ಕ್ಕೆ ಏರಿಕೆಯಾಗಿದೆ. ಆದರೆ ಜನವರಿಯಿಂದ ಸೆಪ್ಟೆಂಬರ್ ತಿಂಗಳವರೆಗೆ 145 ಹುಲಿಗಳು ಸಾವನ್ನಪ್ಪಿವೆ.

ಮಹತ್ವದ ಪತ್ರ ಬರೆದ ರಾಜ್ಯಸಭಾ ಸಂಸದ
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರಕ್ಕೆ (ಎನ್‌ಟಿಸಿಎ) ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಬರೆದ ಪತ್ರದಲ್ಲಿ ಈ ಆಘಾತಕಾರಿ ಸುದ್ದಿ ಹೊರಬಿದ್ದಿದೆ.

ಹುಲಿಗಳ ಸಾವಿನ ಬಗ್ಗೆ ತನಿಖೆ ಆರಂಭಿಸಲಾಗಿದೆಯೇ? ಬೇಟೆ ಹಾಗೂ ವಿದ್ಯುದಾಘಾತ ಪ್ರಮುಖ ಕಾರಣಗಳೆಂದು ವರದಿಯಾಗಿದೆ. ಹುಲಿಗಳ ಸಾವಿನ ಸಂಖ್ಯೆ ಕಡಿಮೆ ಮಾಡಲು ತುರ್ತು ಕ್ರಮಗಳೇನು? ಹುಲಿಗಳ ಸಾವಿನ ಬಗ್ಗೆ ವನ್ಯಜೀವಿ ತಜ್ಞರ ಅಭಿಪ್ರಾಯಗಳೇನು? ಈ ಬಗ್ಗೆ 15 ದಿನಗಳ ಒಳಗೆ ಮಾಹಿತಿ ನೀಡಲು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರಕ್ಕೆ ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಸೂಚನೆ ನೀಡಿದ್ದಾರೆ.

ಹುಲಿ ಸಾವಿನ ರಹಸ್ಯವೇನು?
ಹುಲಿಗಳ ಸಾವಿನ ಬಗ್ಗೆ ಎನ್‌ಟಿ‌ಸಿಎ ಪ್ರತಿದಿನ ತನ್ನ ವೆಬ್‌ಸೈಟ್‌ ನಲ್ಲಿ ಮಾಹಿತಿ ಅಪ್‌ಲೋಡ್ ಮಾಡುತ್ತದೆ. ಹುಲಿ ಯಾವ ಕಾರಣದಿಂದ ಸತ್ತಿದೆ, ನೈಸರ್ಗಿಕವಾಗಿ ಮೃತಪಟ್ಟಿತಾ? ಬೇಟೆಯಾಡಲಾಗಿತ್ತಾ? ವಿದ್ಯುದಾಘಾತದಿಂದ ಮೃತಪಟ್ಟಿತಾ ಎಂಬಿತ್ಯಾದಿ ಕಾರಣಗಳನ್ನು ನಮೂದಿಸಲಾಗುತ್ತದೆ.

ಆದರೆ ಇತ್ತೀಚೆಗೆ ಹುಲಿ ಸಾವಿಗೆ ಯಾವುದೇ ಕಾರಣವನ್ನು ಎನ್‌ಟಿ‌ಸಿಎ ನಮೂದಿಸುತ್ತಿಲ್ಲ. ಈ ನಡೆ ಅನುಮಾನಕ್ಕೆ ಕಾರಣವಾಗಿದೆ. ಹುಲಿಗಳು ಅನೈಸರ್ಗಿಕವಾಗಿ ಸತ್ತಿದ್ದರೆ ನಿಜಕ್ಕೂ ಕಳವಳಕಾರಿ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

8 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

16 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

16 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

16 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

19 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

19 hours ago