BREAKING NEWS

ಪರಿಷತ್‌ ಸದಸ್ಯರಾಗಿ 17ಮಂದಿ ಪ್ರಮಾಣವಚನ ಸ್ವೀಕಾರ: ಸಿಎಂ ಕಾಲಿಗೆರಗಿದ ಸಿಟಿ ರವಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿರುವ 17 ಮಂದಿ ಸೋಮವಾರ (ಜೂನ್‌.24) ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾದ 17 ಮಂದಿ ಪ್ರಮಾಣವಚನ ಪಡೆದರು.

ವೇದಿಕೆ ಕಾರ್ಯಕ್ರಮಕ್ಕು ಮುನ್ನಾ ಸಿಎಂ ಸಿದ್ದರಾಮಯ್ಯ ಅವರು ನೂತನವಾಗಿ ಆಯ್ಕೆಯಾದವರಿಗೆ ಶುಭ ಕೋರಿದರು. ಇವರಿಗೆ ಜತೆಯಾಗಿ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಎಚ್‌.ಕೆ ಪಾಟೀಲ್‌ ಸಾಥ್‌ ನೀಡಿದರು.

ಕಾಂಗ್ರಸ್‌ ಹಾಗೂ ಬಿಜೆಪಿ ಸದಸ್ಯರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಆದರೆ ಕಾಂಗ್ರೆಸ್‌ನ ಬಿಲ್ಕೀಸ್‌ ಬಾನು ಅಲ್ಲಾ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರೇ, ಜಯದೇವ್‌ ಗುತ್ತೇದಾರ್‌ ಬುದ್ಧ, ಬಸವ ಹಾಗೂ ಅಂಬೇಡ್ಕರ್‌ ಹೆಸರಿನಲ್ಲಿ ಪ್ರಮಾನವಚನ ಸ್ವೀಕರಿಸಿದರು.

ಸಿಎಂ ಕಾಲಿಗೆರಗಿದ ಸಿಟಿ ರವಿ: ಪರಿಷತ್‌ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಿದ ಸಿಟಿ ರವಿ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿದರು. ಈ ವೇಳೆ ಸಿಟಿ ರವಿ ಬೆನ್ನುತಟ್ಟಿ, ಕಿವಿ ಹಿಂಡಿ ನಗು ಮೊಗದಿಂದಲೇ ಬೀಳ್ಕೊಟ್ಟರು.

ಪ್ರಮಾಣ ವಚನ ಸ್ವೀಕರಿಸಿದವರು: ಬೋಸರಾಜ್‌, ಯತೀಂದ್ರ ಸಿದ್ದರಾಮಯ್ಯ (ಕಾಂಗ್ರೆಸ್‌), ಗೋಂವಿದರಾಜು (ಕಾಂಗ್ರೆಸ್‌), ಐವಾನ್‌ ಡಿಸೋಜಾ (ಕಾಂಗ್ರೆಸ್‌), ಜವರಾಯಿ ಗೌಡ (ಜೆಡಿಎಸ್‌), ಎಂ.ಜಿ ಮೂಳೆ (ಬಿಜೆಪಿ), ಸಿಟಿ ರವಿ (ಬಿಜೆಪಿ), ರವಿಕುಮಾರ್‌ (ಬಿಜೆಪಿ), ವಸಂತ್‌ ಕುಮಾರ್‌ (ಕಾಂಗ್ರೆಸ್‌), ಡಾ. ಚಂದ್ರಶೇಖರ್‌ ಪಾಟೀಲ್‌ (ಕಾಂಗ್ರೆಸ್‌), ಜಯದೇವ್‌ ಗುತ್ತೇದಾರ್‌ (ಕಾಂಗ್ರೆಸ್‌), ಬಿಲ್ಕಿಸ್‌ ಬಾನು (ಕಾಂಗ್ರೆಸ್‌)

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಹಾರದಲ್ಲಿ ನಿತೀಶ್ ಕುಮಾರ್ ಆಡಳಿತಕ್ಕೆ ಎಳ್ಳುನೀರು

ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ…

2 hours ago

ಕೊಡಗಿನಲ್ಲಿ ಜೀತ ಪದ್ಧತಿ ಇನ್ನೂ ಜೀವಂತ

ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ  ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ…

2 hours ago

ಹನೂರು: ಗ್ರಾಮದೇವತೆ ಬೆಟ್ಟಳ್ಳಿ ಮಾರಮ್ಮ ಜಾತ್ರೆಗೆ ಸಿದ್ಧತೆ

ಮಹಾದೇಶ್‌ ಎಂ ಗೌಡ  ಮಾ.೯ರಿಂದ ೫ ದಿನಗಳ ಕಾಲ ನಡೆಯಲಿರುವ ಹಬ್ಬ; ಸಾವಿರಾರು ಜನರು ಸೇರುವ ನಿರೀಕ್ಷೆ ಹನೂರು: ಪಟ್ಟಣದ…

2 hours ago

ಮಹಿಳಾ ದಿನದಂದು ಮಹಾರಾಣಿ ವಾಣಿವಿಲಾಸ ಸ್ಮರಣೆ

ಸಿರಿ ಮೈಸೂರು ಮೈಸೂರಿನ ನ್ಯಾಯಾಲಯದ ಮುಂಭಾಗದಿಂದ ಮಾಧವ ರಾವ್ ವೃತ್ತದವರೆಗೂ (ಅಗ್ರಹಾರ ವೃತ್ತ) ಇರುವ ರಸ್ತೆಯನ್ನು ವಾಣಿವಿಲಾಸ ರಸ್ತೆ ಎಂದು…

2 hours ago

ಊರ ಕಾಯುವ ಹೆಣ್ಣು ದೇವಿಯರು ನಮ್ಮನ್ನು ಪೊರೆಯುವ ಸ್ತ್ರೀ ಚೈತನ್ಯದ ಕಥೆ ಹೇಳುವರು

ರಾಧಾ ಆದಿಕಾಲದಿಂದ ಮಾನವರನ್ನು ಮೂಕವಿಸ್ಮಿತನನ್ನಾಗಿ ಮಾಡುತ್ತಾ ಬಂದ ವಿಚಿತ್ರಮಯ ಜಗತ್ ಸೃಷ್ಟಿ ಅವರ ಪಾಲಿಗೆ ಬಿಡಿಸಲಾರದ ಒಗಟು. ಆದಿಮಾನವರಿಗಂತೂ, ಭೂಮ್ಯಾಕಾಶಗಳಲ್ಲಿ…

2 hours ago

ಯಾಕೆ ಇವತ್ತಿನ ಈ ಮಹಿಳಾ ದಿನ?

ಸುಕನ್ಯಾ ಕನಾರಳ್ಳಿ ಹೆಣ್ಣು ನಿಮ್ಮ ಆಸ್ತಿಗೆ ವಾರಸುದಾರರನ್ನ ಹುಟ್ಟಿಸುವ ಕೇವಲ ಗರ್ಭ ಅಲ್ಲ, ಅವಳೊಬ್ಬ ಪ್ರಜೆ, ಅಂತ ಸಾರಿ ಸಾರಿ…

2 hours ago