ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನೂತನವಾಗಿ ಆಯ್ಕೆಯಾಗಿರುವ 17 ಮಂದಿ ಸೋಮವಾರ (ಜೂನ್.24) ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾದ 17 ಮಂದಿ ಪ್ರಮಾಣವಚನ ಪಡೆದರು.
ವೇದಿಕೆ ಕಾರ್ಯಕ್ರಮಕ್ಕು ಮುನ್ನಾ ಸಿಎಂ ಸಿದ್ದರಾಮಯ್ಯ ಅವರು ನೂತನವಾಗಿ ಆಯ್ಕೆಯಾದವರಿಗೆ ಶುಭ ಕೋರಿದರು. ಇವರಿಗೆ ಜತೆಯಾಗಿ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಎಚ್.ಕೆ ಪಾಟೀಲ್ ಸಾಥ್ ನೀಡಿದರು.
ಕಾಂಗ್ರಸ್ ಹಾಗೂ ಬಿಜೆಪಿ ಸದಸ್ಯರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಆದರೆ ಕಾಂಗ್ರೆಸ್ನ ಬಿಲ್ಕೀಸ್ ಬಾನು ಅಲ್ಲಾ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರೇ, ಜಯದೇವ್ ಗುತ್ತೇದಾರ್ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾನವಚನ ಸ್ವೀಕರಿಸಿದರು.
ಸಿಎಂ ಕಾಲಿಗೆರಗಿದ ಸಿಟಿ ರವಿ: ಪರಿಷತ್ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಿದ ಸಿಟಿ ರವಿ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿದರು. ಈ ವೇಳೆ ಸಿಟಿ ರವಿ ಬೆನ್ನುತಟ್ಟಿ, ಕಿವಿ ಹಿಂಡಿ ನಗು ಮೊಗದಿಂದಲೇ ಬೀಳ್ಕೊಟ್ಟರು.
ಪ್ರಮಾಣ ವಚನ ಸ್ವೀಕರಿಸಿದವರು: ಬೋಸರಾಜ್, ಯತೀಂದ್ರ ಸಿದ್ದರಾಮಯ್ಯ (ಕಾಂಗ್ರೆಸ್), ಗೋಂವಿದರಾಜು (ಕಾಂಗ್ರೆಸ್), ಐವಾನ್ ಡಿಸೋಜಾ (ಕಾಂಗ್ರೆಸ್), ಜವರಾಯಿ ಗೌಡ (ಜೆಡಿಎಸ್), ಎಂ.ಜಿ ಮೂಳೆ (ಬಿಜೆಪಿ), ಸಿಟಿ ರವಿ (ಬಿಜೆಪಿ), ರವಿಕುಮಾರ್ (ಬಿಜೆಪಿ), ವಸಂತ್ ಕುಮಾರ್ (ಕಾಂಗ್ರೆಸ್), ಡಾ. ಚಂದ್ರಶೇಖರ್ ಪಾಟೀಲ್ (ಕಾಂಗ್ರೆಸ್), ಜಯದೇವ್ ಗುತ್ತೇದಾರ್ (ಕಾಂಗ್ರೆಸ್), ಬಿಲ್ಕಿಸ್ ಬಾನು (ಕಾಂಗ್ರೆಸ್)
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…