BREAKING NEWS

ಪರಿಷತ್‌ ಸದಸ್ಯರಾಗಿ 17ಮಂದಿ ಪ್ರಮಾಣವಚನ ಸ್ವೀಕಾರ: ಸಿಎಂ ಕಾಲಿಗೆರಗಿದ ಸಿಟಿ ರವಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿರುವ 17 ಮಂದಿ ಸೋಮವಾರ (ಜೂನ್‌.24) ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾದ 17 ಮಂದಿ ಪ್ರಮಾಣವಚನ ಪಡೆದರು.

ವೇದಿಕೆ ಕಾರ್ಯಕ್ರಮಕ್ಕು ಮುನ್ನಾ ಸಿಎಂ ಸಿದ್ದರಾಮಯ್ಯ ಅವರು ನೂತನವಾಗಿ ಆಯ್ಕೆಯಾದವರಿಗೆ ಶುಭ ಕೋರಿದರು. ಇವರಿಗೆ ಜತೆಯಾಗಿ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಎಚ್‌.ಕೆ ಪಾಟೀಲ್‌ ಸಾಥ್‌ ನೀಡಿದರು.

ಕಾಂಗ್ರಸ್‌ ಹಾಗೂ ಬಿಜೆಪಿ ಸದಸ್ಯರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಆದರೆ ಕಾಂಗ್ರೆಸ್‌ನ ಬಿಲ್ಕೀಸ್‌ ಬಾನು ಅಲ್ಲಾ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರೇ, ಜಯದೇವ್‌ ಗುತ್ತೇದಾರ್‌ ಬುದ್ಧ, ಬಸವ ಹಾಗೂ ಅಂಬೇಡ್ಕರ್‌ ಹೆಸರಿನಲ್ಲಿ ಪ್ರಮಾನವಚನ ಸ್ವೀಕರಿಸಿದರು.

ಸಿಎಂ ಕಾಲಿಗೆರಗಿದ ಸಿಟಿ ರವಿ: ಪರಿಷತ್‌ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಿದ ಸಿಟಿ ರವಿ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿದರು. ಈ ವೇಳೆ ಸಿಟಿ ರವಿ ಬೆನ್ನುತಟ್ಟಿ, ಕಿವಿ ಹಿಂಡಿ ನಗು ಮೊಗದಿಂದಲೇ ಬೀಳ್ಕೊಟ್ಟರು.

ಪ್ರಮಾಣ ವಚನ ಸ್ವೀಕರಿಸಿದವರು: ಬೋಸರಾಜ್‌, ಯತೀಂದ್ರ ಸಿದ್ದರಾಮಯ್ಯ (ಕಾಂಗ್ರೆಸ್‌), ಗೋಂವಿದರಾಜು (ಕಾಂಗ್ರೆಸ್‌), ಐವಾನ್‌ ಡಿಸೋಜಾ (ಕಾಂಗ್ರೆಸ್‌), ಜವರಾಯಿ ಗೌಡ (ಜೆಡಿಎಸ್‌), ಎಂ.ಜಿ ಮೂಳೆ (ಬಿಜೆಪಿ), ಸಿಟಿ ರವಿ (ಬಿಜೆಪಿ), ರವಿಕುಮಾರ್‌ (ಬಿಜೆಪಿ), ವಸಂತ್‌ ಕುಮಾರ್‌ (ಕಾಂಗ್ರೆಸ್‌), ಡಾ. ಚಂದ್ರಶೇಖರ್‌ ಪಾಟೀಲ್‌ (ಕಾಂಗ್ರೆಸ್‌), ಜಯದೇವ್‌ ಗುತ್ತೇದಾರ್‌ (ಕಾಂಗ್ರೆಸ್‌), ಬಿಲ್ಕಿಸ್‌ ಬಾನು (ಕಾಂಗ್ರೆಸ್‌)

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

8 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

13 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

13 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

17 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

18 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

22 hours ago