ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನೂತನವಾಗಿ ಆಯ್ಕೆಯಾಗಿರುವ 17 ಮಂದಿ ಸೋಮವಾರ (ಜೂನ್.24) ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾದ 17 ಮಂದಿ ಪ್ರಮಾಣವಚನ ಪಡೆದರು.
ವೇದಿಕೆ ಕಾರ್ಯಕ್ರಮಕ್ಕು ಮುನ್ನಾ ಸಿಎಂ ಸಿದ್ದರಾಮಯ್ಯ ಅವರು ನೂತನವಾಗಿ ಆಯ್ಕೆಯಾದವರಿಗೆ ಶುಭ ಕೋರಿದರು. ಇವರಿಗೆ ಜತೆಯಾಗಿ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಎಚ್.ಕೆ ಪಾಟೀಲ್ ಸಾಥ್ ನೀಡಿದರು.
ಕಾಂಗ್ರಸ್ ಹಾಗೂ ಬಿಜೆಪಿ ಸದಸ್ಯರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಆದರೆ ಕಾಂಗ್ರೆಸ್ನ ಬಿಲ್ಕೀಸ್ ಬಾನು ಅಲ್ಲಾ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರೇ, ಜಯದೇವ್ ಗುತ್ತೇದಾರ್ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾನವಚನ ಸ್ವೀಕರಿಸಿದರು.
ಸಿಎಂ ಕಾಲಿಗೆರಗಿದ ಸಿಟಿ ರವಿ: ಪರಿಷತ್ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಿದ ಸಿಟಿ ರವಿ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿದರು. ಈ ವೇಳೆ ಸಿಟಿ ರವಿ ಬೆನ್ನುತಟ್ಟಿ, ಕಿವಿ ಹಿಂಡಿ ನಗು ಮೊಗದಿಂದಲೇ ಬೀಳ್ಕೊಟ್ಟರು.
ಪ್ರಮಾಣ ವಚನ ಸ್ವೀಕರಿಸಿದವರು: ಬೋಸರಾಜ್, ಯತೀಂದ್ರ ಸಿದ್ದರಾಮಯ್ಯ (ಕಾಂಗ್ರೆಸ್), ಗೋಂವಿದರಾಜು (ಕಾಂಗ್ರೆಸ್), ಐವಾನ್ ಡಿಸೋಜಾ (ಕಾಂಗ್ರೆಸ್), ಜವರಾಯಿ ಗೌಡ (ಜೆಡಿಎಸ್), ಎಂ.ಜಿ ಮೂಳೆ (ಬಿಜೆಪಿ), ಸಿಟಿ ರವಿ (ಬಿಜೆಪಿ), ರವಿಕುಮಾರ್ (ಬಿಜೆಪಿ), ವಸಂತ್ ಕುಮಾರ್ (ಕಾಂಗ್ರೆಸ್), ಡಾ. ಚಂದ್ರಶೇಖರ್ ಪಾಟೀಲ್ (ಕಾಂಗ್ರೆಸ್), ಜಯದೇವ್ ಗುತ್ತೇದಾರ್ (ಕಾಂಗ್ರೆಸ್), ಬಿಲ್ಕಿಸ್ ಬಾನು (ಕಾಂಗ್ರೆಸ್)
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…