BREAKING NEWS

ಪರಿಷತ್‌ ಸದಸ್ಯರಾಗಿ 17ಮಂದಿ ಪ್ರಮಾಣವಚನ ಸ್ವೀಕಾರ: ಸಿಎಂ ಕಾಲಿಗೆರಗಿದ ಸಿಟಿ ರವಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿರುವ 17 ಮಂದಿ ಸೋಮವಾರ (ಜೂನ್‌.24) ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾದ 17 ಮಂದಿ ಪ್ರಮಾಣವಚನ ಪಡೆದರು.

ವೇದಿಕೆ ಕಾರ್ಯಕ್ರಮಕ್ಕು ಮುನ್ನಾ ಸಿಎಂ ಸಿದ್ದರಾಮಯ್ಯ ಅವರು ನೂತನವಾಗಿ ಆಯ್ಕೆಯಾದವರಿಗೆ ಶುಭ ಕೋರಿದರು. ಇವರಿಗೆ ಜತೆಯಾಗಿ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಎಚ್‌.ಕೆ ಪಾಟೀಲ್‌ ಸಾಥ್‌ ನೀಡಿದರು.

ಕಾಂಗ್ರಸ್‌ ಹಾಗೂ ಬಿಜೆಪಿ ಸದಸ್ಯರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಆದರೆ ಕಾಂಗ್ರೆಸ್‌ನ ಬಿಲ್ಕೀಸ್‌ ಬಾನು ಅಲ್ಲಾ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರೇ, ಜಯದೇವ್‌ ಗುತ್ತೇದಾರ್‌ ಬುದ್ಧ, ಬಸವ ಹಾಗೂ ಅಂಬೇಡ್ಕರ್‌ ಹೆಸರಿನಲ್ಲಿ ಪ್ರಮಾನವಚನ ಸ್ವೀಕರಿಸಿದರು.

ಸಿಎಂ ಕಾಲಿಗೆರಗಿದ ಸಿಟಿ ರವಿ: ಪರಿಷತ್‌ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಿದ ಸಿಟಿ ರವಿ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿದರು. ಈ ವೇಳೆ ಸಿಟಿ ರವಿ ಬೆನ್ನುತಟ್ಟಿ, ಕಿವಿ ಹಿಂಡಿ ನಗು ಮೊಗದಿಂದಲೇ ಬೀಳ್ಕೊಟ್ಟರು.

ಪ್ರಮಾಣ ವಚನ ಸ್ವೀಕರಿಸಿದವರು: ಬೋಸರಾಜ್‌, ಯತೀಂದ್ರ ಸಿದ್ದರಾಮಯ್ಯ (ಕಾಂಗ್ರೆಸ್‌), ಗೋಂವಿದರಾಜು (ಕಾಂಗ್ರೆಸ್‌), ಐವಾನ್‌ ಡಿಸೋಜಾ (ಕಾಂಗ್ರೆಸ್‌), ಜವರಾಯಿ ಗೌಡ (ಜೆಡಿಎಸ್‌), ಎಂ.ಜಿ ಮೂಳೆ (ಬಿಜೆಪಿ), ಸಿಟಿ ರವಿ (ಬಿಜೆಪಿ), ರವಿಕುಮಾರ್‌ (ಬಿಜೆಪಿ), ವಸಂತ್‌ ಕುಮಾರ್‌ (ಕಾಂಗ್ರೆಸ್‌), ಡಾ. ಚಂದ್ರಶೇಖರ್‌ ಪಾಟೀಲ್‌ (ಕಾಂಗ್ರೆಸ್‌), ಜಯದೇವ್‌ ಗುತ್ತೇದಾರ್‌ (ಕಾಂಗ್ರೆಸ್‌), ಬಿಲ್ಕಿಸ್‌ ಬಾನು (ಕಾಂಗ್ರೆಸ್‌)

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

55 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

3 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

3 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

3 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

4 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

4 hours ago