BREAKING NEWS

ಇವಿ ಬ್ಯಾಟರಿ ಚಾರ್ಜ್​​ಗೆ ಶೇ 18 ಸೇವಾ ತೆರಿಗೆ : ಎಎಆರ್‌

ಬೆಂಗಳೂರು : ಕರ್ನಾಟಕದಲ್ಲಿ ಎಲೆಕ್ಟ್ರಿಕ್‌ ವಾಹನ ಮಾಲೀಕರು ಮತ್ತು ಎಲೆಕ್ಟ್ರಿಕ್ ವಾಹನ ಖರೀದಿಸಲು ಚಿಂತನೆ ನಡೆಸುತ್ತಿರುವವರಿಗೆ ‘ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ (ಎಎಆರ್‌)’ ಆಘಾತ ನೀಡಿದೆ. ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿಗಳನ್ನು ಚಾರ್ಜ್ ಮಾಡಲು ಶೇ 18ರ ಸೇವಾ ತೆರಿಗೆ ಅನ್ವಯವಾಗುತ್ತದೆ ಎಂದು ಎಎಆರ್ ಹೇಳಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಎಎಆರ್ ಈ ಹೇಳಿಕೆ ನೀಡಿದೆ.

ಬ್ಯಾಟರಿಗಳನ್ನು ಚಾರ್ಜ್ ಮಾಡುವುದನ್ನು ಸರಕುಗಳ ಪೂರೈಕೆ ಅಥವಾ ಸೇವಾ ಪೂರೈಕೆ ಎಂದು ಪರಿಗಣಿಸಬೇಕೇ ಎಂಬ ಬಗ್ಗೆ ಸ್ಪಷ್ಟೀಕರಣ ಪಡೆಯಲು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಕರ್ನಾಟಕ ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ಅನ್ನು ಸಂಪರ್ಕಿಸಿತ್ತು.

ಬ್ಯಾಟರಿಗಳನ್ನು ಚಾರ್ಜ್ ಮಾಡುವುದನ್ನು ಸೇವಾ ಪೂರೈಕೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಅದಕ್ಕಿರುವ ಪ್ರಸ್ತುತ ದರದ ಶೇ 18 ಸೇವಾ ತೆರಿಗೆ ಪಾವತಿಸಬೇಕಾಗುತ್ತದೆ ಎಂದು ಕರ್ನಾಟಕ ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ತಿಳಿಸಿದೆ. ಚಾರ್ಜಿಂಗ್ ಘಟಕಕ್ಕೆ ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌ (ITC) ಪ್ರಯೋಜನ ಲಭ್ಯವಾಗಲಿದೆ ಎಂದು ಅದು ಹೇಳಿದೆ.

ಶೇ 18 ರ ಸೇವಾ ತೆರಿಗೆ ವಿಧಿಸುವ ಕ್ರಮವು ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಘಟಕಗಳ ಸ್ಥಾಪನೆಗೆ ಹಿನ್ನಡೆಯಾಗಬಹುದು ಎನ್ನಲಾಗಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯು ಕರ್ನಾಟಕದಲ್ಲಿ ಇವಿ ಚಾರ್ಜಿಂಗ್ ಘಟಕಗಳನ್ನು ಸ್ಥಾಪಿಸಲು ಚಿಂತನೆ ನಡೆಸಿತ್ತು. ಇದೇ ಕಾರಣಕ್ಕೆ ಕರ್ನಾಟಕ ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ಬಳಿ ಸ್ಪಷ್ಟನೆ ಕೋರಿತ್ತು ಎಂದು ನ್ಯೂಸ್‌ 9 ವರದಿ ಉಲ್ಲೇಖಿಸಿದೆ.

ಪ್ರಸ್ತುತ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕವು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ ಮತ್ತು ದೆಹಲಿ ನಂತರದ ಸ್ಥಾನದಲ್ಲಿವೆ.

andolanait

Recent Posts

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30 ಮಂದಿಗೆ ಗಾಯ

ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…

2 mins ago

ಅಯ್ಯಪ್ಪಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಡಿಸೆಂಬರ್.‌27ರಂದು ಶಬರಿಮಲೆಯಲ್ಲಿ ಮಂಡಲ ಪೂಜೆ

ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.‌27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…

18 mins ago

ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌…

1 hour ago

ಸಮ ಸಮಾಜಕ್ಕಾಗಿ ಬಡಿದಾಡಿದ ಸಮಾಜವಾದಿಯ ಕತೆ

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…

2 hours ago

ದ್ವೇಷ ಕಾರುವವರಿಗೆ ಬೀಳಲಿದೆಯೇ ಕಡಿವಾಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…

2 hours ago

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…

4 hours ago