BREAKING NEWS

ಇವಿ ಬ್ಯಾಟರಿ ಚಾರ್ಜ್​​ಗೆ ಶೇ 18 ಸೇವಾ ತೆರಿಗೆ : ಎಎಆರ್‌

ಬೆಂಗಳೂರು : ಕರ್ನಾಟಕದಲ್ಲಿ ಎಲೆಕ್ಟ್ರಿಕ್‌ ವಾಹನ ಮಾಲೀಕರು ಮತ್ತು ಎಲೆಕ್ಟ್ರಿಕ್ ವಾಹನ ಖರೀದಿಸಲು ಚಿಂತನೆ ನಡೆಸುತ್ತಿರುವವರಿಗೆ ‘ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ (ಎಎಆರ್‌)’ ಆಘಾತ ನೀಡಿದೆ. ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿಗಳನ್ನು ಚಾರ್ಜ್ ಮಾಡಲು ಶೇ 18ರ ಸೇವಾ ತೆರಿಗೆ ಅನ್ವಯವಾಗುತ್ತದೆ ಎಂದು ಎಎಆರ್ ಹೇಳಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಎಎಆರ್ ಈ ಹೇಳಿಕೆ ನೀಡಿದೆ.

ಬ್ಯಾಟರಿಗಳನ್ನು ಚಾರ್ಜ್ ಮಾಡುವುದನ್ನು ಸರಕುಗಳ ಪೂರೈಕೆ ಅಥವಾ ಸೇವಾ ಪೂರೈಕೆ ಎಂದು ಪರಿಗಣಿಸಬೇಕೇ ಎಂಬ ಬಗ್ಗೆ ಸ್ಪಷ್ಟೀಕರಣ ಪಡೆಯಲು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಕರ್ನಾಟಕ ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ಅನ್ನು ಸಂಪರ್ಕಿಸಿತ್ತು.

ಬ್ಯಾಟರಿಗಳನ್ನು ಚಾರ್ಜ್ ಮಾಡುವುದನ್ನು ಸೇವಾ ಪೂರೈಕೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಅದಕ್ಕಿರುವ ಪ್ರಸ್ತುತ ದರದ ಶೇ 18 ಸೇವಾ ತೆರಿಗೆ ಪಾವತಿಸಬೇಕಾಗುತ್ತದೆ ಎಂದು ಕರ್ನಾಟಕ ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ತಿಳಿಸಿದೆ. ಚಾರ್ಜಿಂಗ್ ಘಟಕಕ್ಕೆ ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌ (ITC) ಪ್ರಯೋಜನ ಲಭ್ಯವಾಗಲಿದೆ ಎಂದು ಅದು ಹೇಳಿದೆ.

ಶೇ 18 ರ ಸೇವಾ ತೆರಿಗೆ ವಿಧಿಸುವ ಕ್ರಮವು ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಘಟಕಗಳ ಸ್ಥಾಪನೆಗೆ ಹಿನ್ನಡೆಯಾಗಬಹುದು ಎನ್ನಲಾಗಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯು ಕರ್ನಾಟಕದಲ್ಲಿ ಇವಿ ಚಾರ್ಜಿಂಗ್ ಘಟಕಗಳನ್ನು ಸ್ಥಾಪಿಸಲು ಚಿಂತನೆ ನಡೆಸಿತ್ತು. ಇದೇ ಕಾರಣಕ್ಕೆ ಕರ್ನಾಟಕ ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ಬಳಿ ಸ್ಪಷ್ಟನೆ ಕೋರಿತ್ತು ಎಂದು ನ್ಯೂಸ್‌ 9 ವರದಿ ಉಲ್ಲೇಖಿಸಿದೆ.

ಪ್ರಸ್ತುತ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕವು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ ಮತ್ತು ದೆಹಲಿ ನಂತರದ ಸ್ಥಾನದಲ್ಲಿವೆ.

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

5 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

5 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

5 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

5 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

17 hours ago