BREAKING NEWS

ಇವಿ ಬ್ಯಾಟರಿ ಚಾರ್ಜ್​​ಗೆ ಶೇ 18 ಸೇವಾ ತೆರಿಗೆ : ಎಎಆರ್‌

ಬೆಂಗಳೂರು : ಕರ್ನಾಟಕದಲ್ಲಿ ಎಲೆಕ್ಟ್ರಿಕ್‌ ವಾಹನ ಮಾಲೀಕರು ಮತ್ತು ಎಲೆಕ್ಟ್ರಿಕ್ ವಾಹನ ಖರೀದಿಸಲು ಚಿಂತನೆ ನಡೆಸುತ್ತಿರುವವರಿಗೆ ‘ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ (ಎಎಆರ್‌)’ ಆಘಾತ ನೀಡಿದೆ. ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿಗಳನ್ನು ಚಾರ್ಜ್ ಮಾಡಲು ಶೇ 18ರ ಸೇವಾ ತೆರಿಗೆ ಅನ್ವಯವಾಗುತ್ತದೆ ಎಂದು ಎಎಆರ್ ಹೇಳಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಎಎಆರ್ ಈ ಹೇಳಿಕೆ ನೀಡಿದೆ.

ಬ್ಯಾಟರಿಗಳನ್ನು ಚಾರ್ಜ್ ಮಾಡುವುದನ್ನು ಸರಕುಗಳ ಪೂರೈಕೆ ಅಥವಾ ಸೇವಾ ಪೂರೈಕೆ ಎಂದು ಪರಿಗಣಿಸಬೇಕೇ ಎಂಬ ಬಗ್ಗೆ ಸ್ಪಷ್ಟೀಕರಣ ಪಡೆಯಲು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಕರ್ನಾಟಕ ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ಅನ್ನು ಸಂಪರ್ಕಿಸಿತ್ತು.

ಬ್ಯಾಟರಿಗಳನ್ನು ಚಾರ್ಜ್ ಮಾಡುವುದನ್ನು ಸೇವಾ ಪೂರೈಕೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಅದಕ್ಕಿರುವ ಪ್ರಸ್ತುತ ದರದ ಶೇ 18 ಸೇವಾ ತೆರಿಗೆ ಪಾವತಿಸಬೇಕಾಗುತ್ತದೆ ಎಂದು ಕರ್ನಾಟಕ ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ತಿಳಿಸಿದೆ. ಚಾರ್ಜಿಂಗ್ ಘಟಕಕ್ಕೆ ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌ (ITC) ಪ್ರಯೋಜನ ಲಭ್ಯವಾಗಲಿದೆ ಎಂದು ಅದು ಹೇಳಿದೆ.

ಶೇ 18 ರ ಸೇವಾ ತೆರಿಗೆ ವಿಧಿಸುವ ಕ್ರಮವು ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಘಟಕಗಳ ಸ್ಥಾಪನೆಗೆ ಹಿನ್ನಡೆಯಾಗಬಹುದು ಎನ್ನಲಾಗಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯು ಕರ್ನಾಟಕದಲ್ಲಿ ಇವಿ ಚಾರ್ಜಿಂಗ್ ಘಟಕಗಳನ್ನು ಸ್ಥಾಪಿಸಲು ಚಿಂತನೆ ನಡೆಸಿತ್ತು. ಇದೇ ಕಾರಣಕ್ಕೆ ಕರ್ನಾಟಕ ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ಬಳಿ ಸ್ಪಷ್ಟನೆ ಕೋರಿತ್ತು ಎಂದು ನ್ಯೂಸ್‌ 9 ವರದಿ ಉಲ್ಲೇಖಿಸಿದೆ.

ಪ್ರಸ್ತುತ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕವು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ ಮತ್ತು ದೆಹಲಿ ನಂತರದ ಸ್ಥಾನದಲ್ಲಿವೆ.

andolanait

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

6 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

10 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

11 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

11 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

15 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

15 hours ago