ನವದೆಹಲಿ: 1984 ರ ಸಿಖ್ ವಿರೋಧಿ ದಂಗೆ ವೇಳೆ ವ್ಯಕ್ತಿಯೊಬ್ಬನನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಬುಧವಾರ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಅವರನ್ನು ಖುಲಾಸೆಗೊಳಿಸಿದೆ.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು, ಇತರ ಇಬ್ಬರು ಆರೋಪಿಗಳಾದ ವೇದ್ ಪ್ರಕಾಶ್ ಪಿಯಾಲ್ ಮತ್ತು ಬ್ರಹ್ಮಾನಂದ್ ಗುಪ್ತಾ ಅವರನ್ನು ಸಹ ಖುಲಾಸೆಗೊಳಿಸಿದ್ದು, ಮಾಜಿ ಕಾಂಗ್ರೆಸ್ ನಾಯಕ ಸೇರಿದಂತೆ ಮೂವರ ವಿರುದ್ಧದ ಕೊಲೆ ಮತ್ತು ಗಲಭೆ ಪ್ರಕರಣವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ.
ಸುಲ್ತಾನ್ಪುರಿಯಲ್ಲಿ ನಡೆದ ಘಟನೆಯಲ್ಲಿ ಸಿಖ್ ವ್ಯಕ್ತಿ ಸುರ್ಜಿತ್ ಸಿಂಗ್ ಮೃತಪಟ್ಟಿದ್ದರು.
ಆರೋಪಿ ಸಜ್ಜನ್ ಕುಮಾರ್ಗೆ ಕೇವಲ ಅನುಮಾನದ ಮೇಲೆ ಶಿಕ್ಷ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಕೋರ್ಟ್ ಖುಲಾಸೆಗೊಳಿಸಿದೆ.
ಅಕ್ಟೋಬರ್ 31, 1984 ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅವರ ಸಿಖ್ ಅಂಗರಕ್ಷಕರು ಹತ್ಯೆ ಮಾಡಿದ ನಂತರ ಗಲಭೆಗಳು ಭುಗಿಲೆದ್ದವು.
ಗಲಭೆಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್ ಕುಮಾರ್ ಅವರು ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ.
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…
ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…