BREAKING NEWS

1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಸಜ್ಜನ್ ಕುಮಾರ್ ಖುಲಾಸೆಗೊಳಿಸಿದ ದೆಹಲಿ ಕೋರ್ಟ್

ನವದೆಹಲಿ: 1984 ರ ಸಿಖ್ ವಿರೋಧಿ ದಂಗೆ ವೇಳೆ ವ್ಯಕ್ತಿಯೊಬ್ಬನನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಬುಧವಾರ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಅವರನ್ನು ಖುಲಾಸೆಗೊಳಿಸಿದೆ.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು,  ಇತರ ಇಬ್ಬರು ಆರೋಪಿಗಳಾದ ವೇದ್ ಪ್ರಕಾಶ್ ಪಿಯಾಲ್ ಮತ್ತು ಬ್ರಹ್ಮಾನಂದ್ ಗುಪ್ತಾ ಅವರನ್ನು ಸಹ ಖುಲಾಸೆಗೊಳಿಸಿದ್ದು, ಮಾಜಿ ಕಾಂಗ್ರೆಸ್ ನಾಯಕ ಸೇರಿದಂತೆ ಮೂವರ ವಿರುದ್ಧದ ಕೊಲೆ ಮತ್ತು ಗಲಭೆ ಪ್ರಕರಣವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ.

ಸುಲ್ತಾನ್‌ಪುರಿಯಲ್ಲಿ ನಡೆದ ಘಟನೆಯಲ್ಲಿ ಸಿಖ್‌ ವ್ಯಕ್ತಿ ಸುರ್ಜಿತ್‌ ಸಿಂಗ್‌ ಮೃತಪಟ್ಟಿದ್ದರು.

ಆರೋಪಿ ಸಜ್ಜನ್ ಕುಮಾರ್‌ಗೆ ಕೇವಲ ಅನುಮಾನದ ಮೇಲೆ ಶಿಕ್ಷ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಕೋರ್ಟ್ ಖುಲಾಸೆಗೊಳಿಸಿದೆ.

ಅಕ್ಟೋಬರ್ 31, 1984 ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅವರ ಸಿಖ್ ಅಂಗರಕ್ಷಕರು ಹತ್ಯೆ ಮಾಡಿದ ನಂತರ ಗಲಭೆಗಳು ಭುಗಿಲೆದ್ದವು.

ಗಲಭೆಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್ ಕುಮಾರ್ ಅವರು ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ.

andolanait

Recent Posts

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

8 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

14 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

15 hours ago

ಮಡಿಕೇರಿ: ಪೊನ್ನಂಪೇಟೆಯಲ್ಲಿ ವೈಭವ ಪೂರಿತ ಗಣೇಶ ಹಬ್ಬ

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ…

15 hours ago