ನವದೆಹಲಿ: 1984 ರ ಸಿಖ್ ವಿರೋಧಿ ದಂಗೆ ವೇಳೆ ವ್ಯಕ್ತಿಯೊಬ್ಬನನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಬುಧವಾರ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಅವರನ್ನು ಖುಲಾಸೆಗೊಳಿಸಿದೆ.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು, ಇತರ ಇಬ್ಬರು ಆರೋಪಿಗಳಾದ ವೇದ್ ಪ್ರಕಾಶ್ ಪಿಯಾಲ್ ಮತ್ತು ಬ್ರಹ್ಮಾನಂದ್ ಗುಪ್ತಾ ಅವರನ್ನು ಸಹ ಖುಲಾಸೆಗೊಳಿಸಿದ್ದು, ಮಾಜಿ ಕಾಂಗ್ರೆಸ್ ನಾಯಕ ಸೇರಿದಂತೆ ಮೂವರ ವಿರುದ್ಧದ ಕೊಲೆ ಮತ್ತು ಗಲಭೆ ಪ್ರಕರಣವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ.
ಸುಲ್ತಾನ್ಪುರಿಯಲ್ಲಿ ನಡೆದ ಘಟನೆಯಲ್ಲಿ ಸಿಖ್ ವ್ಯಕ್ತಿ ಸುರ್ಜಿತ್ ಸಿಂಗ್ ಮೃತಪಟ್ಟಿದ್ದರು.
ಆರೋಪಿ ಸಜ್ಜನ್ ಕುಮಾರ್ಗೆ ಕೇವಲ ಅನುಮಾನದ ಮೇಲೆ ಶಿಕ್ಷ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಕೋರ್ಟ್ ಖುಲಾಸೆಗೊಳಿಸಿದೆ.
ಅಕ್ಟೋಬರ್ 31, 1984 ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅವರ ಸಿಖ್ ಅಂಗರಕ್ಷಕರು ಹತ್ಯೆ ಮಾಡಿದ ನಂತರ ಗಲಭೆಗಳು ಭುಗಿಲೆದ್ದವು.
ಗಲಭೆಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್ ಕುಮಾರ್ ಅವರು ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…