ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಪುಲ್ ಬಂಗಾಶ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಸಿಬಿಐ ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವೆಂಬರ್ 1,1984 ರಲ್ಲಿ ರಾಷ್ಟ್ರೀಯ ರಾಜಧಾನಿಯ ಪುಲ್ ಬಂಗಾಶ್ ಪ್ರದೇಶದಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಮೂರು ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಕಳೆದ ತಿಂಗಳು ಟೈಟ್ಲರ್ ಅವರ ಧ್ವನಿ ಮಾದರಿಗಳನ್ನು ಸಂಗ್ರಹಿಸಿತ್ತು. ಸಂತ್ರಸ್ತರನ್ನು ಹತ್ಯೆ ಮಾಡಿದ ಗುಂಪನ್ನು ಪ್ರಚೋದಿಸಿದ ಆರೋಪ ಕಾಂಗ್ರೆಸ್ ನಾಯಕನ ಮೇಲಿದೆ.
ನಾನೇನು ಮಾಡಿದ್ದೇನೆ? ನನ್ನ ವಿರುದ್ಧ ಪುರಾವೆಗಳಿದ್ದರೆ, ನಾನು ನೇಣು ಹಾಕಿಕೊಳ್ಳಲು ಸಿದ್ಧನಿದ್ದೇನೆ. ಇದು 1984 ರ ಗಲಭೆ ಪ್ರಕರಣಕ್ಕೆ ಸಂಬಂಧಿಸಿಲ್ಲ, ಆದರೆ ಅವರು , ಇನ್ನೊಂದು ಪ್ರಕರಣದಲ್ಲಿ ನನ್ನ ಧ್ವನಿಯನ್ನು (ಮಾದರಿ) ಬಯಸಿದ್ದರು ಎಂದು ಅವರು ಸಿಬಿಐನ ವಿಧಿವಿಜ್ಞಾನ ಪ್ರಯೋಗಾಲಯದಿಂದ ಹೊರಬರುವಾಗ ಟೈಟ್ಲರ್ ಹೇಳಿದರು.
2015ರ ಡಿಸೆಂಬರ್ನಲ್ಲಿ ನ್ಯಾಯಾಲಯವು ಈ ಕುರಿತು ಹೆಚ್ಚಿನ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಿತ್ತು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…