BREAKING NEWS

ಕೈ ಅಭ್ಯರ್ಥಿ ಬೆಂಬಲಿಗರ ಮನೆಯಲ್ಲಿ 2 ಕೋಟಿ ರೂ. ವಶ

ಮಂಡ್ಯ : ಜಿಲ್ಲೆಯ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಎಂ ಉದಯ್ ಬೆಂಬಲಿಗರ ಮನೆ ಮೇಲೆ ದಾಳಿ ನಡೆಸಿರುವ ಚುನಾವಣಾ ಅಧಿಕಾರಿಗಳು 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿದ್ದಾರೆ.
ಕೆಎಂ ಉದಯ್ ಬೆಂಬಲಿಗ ಮದ್ದೂರು ಪಟ್ಟಣದ ದೊಡ್ಡಿ ಬೀದಿಯ ಸುರೇಶ್ ಹಾಗೂ ರಮೇಶ್ ಮನೆ ಮೇಲೆ ಫ್ಲೈಯಿಂಗ್ ಸ್ಕ್ವಾರ್ಡ್ ತಂಡ ದಾಳಿ ನಡೆಸಿದೆ.
ಬೆಳ್ಳಂಬೆಳಗ್ಗೆ 5:30ರ ವೇಳೆಗೆ ಅಧಿಕಾರಿಗಳು ದಾಳಿ ಮಾಡಿ 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿ ಅದನ್ನು ವಶಪಡಿಸಿಕೊಂಡಿದ್ದಾರೆ.
ಸುರೇಶ್ ಮನೆಯಲ್ಲಿ 2 ಕೋಟಿ ರೂ. ಪತ್ತೆಯಾಗಿದೆ, ರಮೇಶ್ ಮನೆಯಲ್ಲಿ 3.50 ಲಕ್ಷ ರೂ. ಪತ್ತೆಯಾಗಿದೆ.
ಚುನಾವಣಾ ಅಧಿಕಾರಿಗಳು ಹಣವನ್ನು ಮದ್ದೂರು ಪೊಲೀಸರ ವಶಕ್ಕೆ ನೀಡಿದ್ದು, ಪೊಲೀಸರು ಸುರೇಶ್ ಬಾಬು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

lokesh

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

5 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

6 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

6 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

6 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

7 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

7 hours ago