ಮಂಡ್ಯ : ಜಿಲ್ಲೆಯ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಎಂ ಉದಯ್ ಬೆಂಬಲಿಗರ ಮನೆ ಮೇಲೆ ದಾಳಿ ನಡೆಸಿರುವ ಚುನಾವಣಾ ಅಧಿಕಾರಿಗಳು 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿದ್ದಾರೆ.
ಕೆಎಂ ಉದಯ್ ಬೆಂಬಲಿಗ ಮದ್ದೂರು ಪಟ್ಟಣದ ದೊಡ್ಡಿ ಬೀದಿಯ ಸುರೇಶ್ ಹಾಗೂ ರಮೇಶ್ ಮನೆ ಮೇಲೆ ಫ್ಲೈಯಿಂಗ್ ಸ್ಕ್ವಾರ್ಡ್ ತಂಡ ದಾಳಿ ನಡೆಸಿದೆ.
ಬೆಳ್ಳಂಬೆಳಗ್ಗೆ 5:30ರ ವೇಳೆಗೆ ಅಧಿಕಾರಿಗಳು ದಾಳಿ ಮಾಡಿ 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿ ಅದನ್ನು ವಶಪಡಿಸಿಕೊಂಡಿದ್ದಾರೆ.
ಸುರೇಶ್ ಮನೆಯಲ್ಲಿ 2 ಕೋಟಿ ರೂ. ಪತ್ತೆಯಾಗಿದೆ, ರಮೇಶ್ ಮನೆಯಲ್ಲಿ 3.50 ಲಕ್ಷ ರೂ. ಪತ್ತೆಯಾಗಿದೆ.
ಚುನಾವಣಾ ಅಧಿಕಾರಿಗಳು ಹಣವನ್ನು ಮದ್ದೂರು ಪೊಲೀಸರ ವಶಕ್ಕೆ ನೀಡಿದ್ದು, ಪೊಲೀಸರು ಸುರೇಶ್ ಬಾಬು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…